BREAKING NEWS

ತಾಂಜಾನಿಯಾದಲ್ಲಿ ನಿರ್ಮಾಣವಾಗಲಿದೆ ಭಾರತದ ಹೊರಗಿನ ಮೊದಲ ಐಐಟಿ: ವಿದೇಶಾಂಗ ಸಚಿವಾಲಯ

ನವದೆಹಲಿ: ಭಾರತದ ಹೊರಗಿನ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಂಜಿಬಾರ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಪೂರ್ವ ಆಫ್ರಿಕಾದ ಕರಾವಳಿಯಲ್ಲಿರುವ ತಾಂಜೇನಿಯಾದ ದ್ವೀಪಸಮೂಹವಾಗಿರುವ ಜಾಂಜಿಬಾರ್‌ನಲ್ಲಿ ಐಐಟಿ ಮದ್ರಾಸ್‌ನ ಕ್ಯಾಂಪಸ್‌ನ ಸ್ಥಾಪನೆಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಾಗಿದೆ.

ಬುಧವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಜಂಜಿಬಾರ್ ಅಧ್ಯಕ್ಷ ಹುಸೇನ್ ಅಲಿ ಮ್ವಿನಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಜೈಂಶಕರ್ ಅವರು ಪ್ರಸ್ತುತ ತಾಂಜಾನಿಯಾ ಪ್ರವಾಸದಲ್ಲಿದ್ದಾರೆ.

“ಭಾರತದ ಹೊರಗೆ ಸ್ಥಾಪಿಸಲಾದ ಮೊದಲ ಐಐಟಿ ಕ್ಯಾಂಪಸ್ ಜಾಂಜಿಬಾರ್‌ನಲ್ಲಿರಲಿದೆ” ಎಂದು ಸಚಿವಾಲಯ ಹೇಳಿದೆ.

ಭಾರತದ ಶಿಕ್ಷಣ ಸಚಿವಾಲಯ, ಐಐಟಿ ಮದ್ರಾಸ್ ಮತ್ತು ಜಾಂಜಿಬಾರ್‌ನ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಸಚಿವಾಲಯದ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅದು ಹೇಳಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಉನ್ನತ ಕಾರ್ಯಕ್ಷಮತೆ ಹೊಂದಿರುವ ಭಾರತೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳನ್ನು ಇತರ ದೇಶಗಳಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

“ಈ ಕ್ಯಾಂಪಸ್ ಭಾರತ ಮತ್ತು ತಾಂಜಾನಿಯಾ ನಡುವಿನ ದೀರ್ಘಕಾಲದ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಶೈಕ್ಷಣಿಕ ಪಾಲುದಾರಿಕೆಯ ಸಂಬಂಧವನ್ನು ಔಪಚಾರಿಕಗೊಳಿಸಲಾಗಿದೆ.  ಐಐಟಿ 2023ರ ಅಕ್ಟೋಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದೆ.

andolanait

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

28 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago