ಬೆಂಗಳೂರು : ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಟಿಕೆಟ್ ಘೋಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು.
ಟಿಕೆಟ್ ಕೈ ತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಆಗಾಗ್ಲೇ ಹೇಳಿದ್ದೇವೆ. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದರು.
ಇನ್ನೂ 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಕೆಲಸಗಳನ್ನ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು, ಹಲವಾರು ಯುವಕರಿಗೆ ಕೊಟ್ಟ ಕೆಲಸ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು.
ಹಿರಿಯ ನಾಯಕರಿಗೆ ಟಿಕೆಟ್ ಕೈ ತಪ್ಪಿರುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯರು ಪಕ್ಷವನ್ನ ಕಟ್ಟಿದ್ದಾರೆ. ಪಕ್ಷ ಹಿರಿಯರನ್ನು ಬೆಳೆಸಿದೆ. ಅವರಿಗೆ ಪಕ್ಷದೊಂದಿಗೆ ಅನ್ಯೋನ್ಯ ಸಂಬಂಧ ಇರುವ ಕಾರಣ ಯಾವುದು ತೊಂದರೆ ಆಗುವುದಿಲ್ಲ. ಟಿಕೆಟ್ ತಪ್ಪುವವರಿಗೆ
ಯಾಕೆ? ಏನು ಕಾರಣ? ಮುಂದೆ ಯಾವ ರೀತಿಯ ಅವಕಾಶ ಇದೆ ಎಂಬುದನ್ನ ಹೇಳಿದ್ದೀವಿ. ನಮ್ಮದು ರಾಷ್ಟ್ರೀಯ ಪಕ್ಷ, ಶಿಸ್ತಿನ ಪಕ್ಷ ಬಿಜೆಪಿ. ಎಲ್ಲ ನಿಭಾಯಿಸುವ ಶಕ್ತಿ ಬಿಜೆಪಿಗೆ ಇದೆ ಎಂದರು.
ಇನ್ನು ಪಟ್ಟಿ ತಯಾರಿಸುವ ವೇಳೆ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ ಎನ್ನುವುದು ಊಹಾಪೋಹ. ಎರಡು ದಿನ ಪೂರ್ಣ ಪ್ರಮಾಣದಲ್ಲಿ ಕೂತು ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿ ಮಾಡಿ ಕೆಲವು ಸಲಹೆ ಪಡೆಯಲಾಗಿದೆ. ಸಂಪೂರ್ಣವಾಗಿ ಯಡಿಯೂರಪ್ಪ ಅವರು ಈ ಪಟ್ಟಿ ತಯಾರಿಸುವಲ್ಲಿ ಭಾಗಿಯಾಗಿದ್ದಾರೆ ಎಂದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…