ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್ಪ್ಲೇನಡ್ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ ಕೋಲ್ಕತ್ತ ಮೆಟ್ರೊ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ.
ಈ ಪ್ರಾಯೋಗಿಕ ಸಂಚಾರದಲ್ಲಿ ಎಂಜಿನಿಯರ್ಗಳು ಮತ್ತು ತಂತ್ರಜ್ಞರು ಮಾತ್ರ ಭಾಗವಹಿಸಿದ್ದರು. ಇದೊಂದು ಐತಿಹಾಸಿಕ ಕ್ಷಣವಾಗಿದೆ ಎಂದು ಕೋಲ್ಕತ್ತ ಮೆಟ್ರೊ ರೈಲ್ವೇ ನಿರ್ವಾಹಕ ಪಿ ಉದಯ್ ಕುಮಾರ್ ರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.
‘ಹೌರಾ ಮೈದಾನದಿಂದ ಎಸ್ಪ್ಲೇನಡ್ ಮೆಟ್ರೊ ನಿಲ್ದಾಣದವರೆ ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ. ಮುಂದಿನ ಐದರಿಂದ ಏಳು ತಿಂಗಳವರೆಗೆ ಪ್ರಾಯೋಗಿಕ ಸಂಚಾರವನ್ನು ಮುಂದುವರಿಸಲಾಗುತ್ತದೆ. ಇದಾದ ಬಳಿಕವಷ್ಟೇ ನಿಯಮಿತ ಸೇವೆಗಳು ಪ್ರಾರಂಭವಾಗುತ್ತದೆ‘ ಎಂದು ಉದಯ್ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈ ಸುರಂಗ ಮಾರ್ಗವು ನದಿಯ ಮೇಲ್ಮೈಯಿಂದ 13 ಮೀಟರ್ ಕೆಳಗಿದ್ದು, ಭೂಮಿಯ ಮೇಲ್ಮೈಯಿಂದ 33 ಮೀಟರ್ ಕೆಳಗಿದೆ. ಸುರಂಗ ಮಾರ್ಗವನ್ನು ರೈಲು ಹಾದು ಹೋಗಲು ಸುಮಾರು 45 ಸೆಕೆಂಡ್ ತೆಗೆದುಕೊಳ್ಳುತ್ತದೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಹಾಗೂ ಸಂಚಾರ ದಟ್ಟಣೆಯನ್ನು ತಪ್ಪಿಸುವುದಕೋಸ್ಕರ ಅಂಡರ್ ವಾಟರ್ ಮೆಟ್ರೋ ಮಾರ್ಗವನ್ನು ನಿರ್ಮಿಸಲಾಗಿದೆ.
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…