BREAKING NEWS

ಕೋಲ್ಕತ್ತದಲ್ಲಿ ಮೊದಲ ಅಂಡರ್ ವಾಟರ್ ಮೆಟ್ರೊ ಪ್ರಾಯೋಗಿಕ ಸಂಚಾರ

ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್‌ಪ್ಲೇನಡ್‌ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ ಕೋಲ್ಕತ್ತ ಮೆಟ್ರೊ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ.
ಈ ಪ್ರಾಯೋಗಿಕ ಸಂಚಾರದಲ್ಲಿ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರು ಮಾತ್ರ ಭಾಗವಹಿಸಿದ್ದರು. ಇದೊಂದು ಐತಿಹಾಸಿಕ ಕ್ಷಣವಾಗಿದೆ ಎಂದು ಕೋಲ್ಕತ್ತ ಮೆಟ್ರೊ ರೈಲ್ವೇ ನಿರ್ವಾಹಕ ಪಿ ಉದಯ್‌ ಕುಮಾರ್‌ ರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.

‘ಹೌರಾ ಮೈದಾನದಿಂದ ಎಸ್‌ಪ್ಲೇನಡ್‌ ಮೆಟ್ರೊ ನಿಲ್ದಾಣದವರೆ ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ. ಮುಂದಿನ ಐದರಿಂದ ಏಳು ತಿಂಗಳವರೆಗೆ ಪ್ರಾಯೋಗಿಕ ಸಂಚಾರವನ್ನು ಮುಂದುವರಿಸಲಾಗುತ್ತದೆ. ಇದಾದ ಬಳಿಕವಷ್ಟೇ ನಿಯಮಿತ ಸೇವೆಗಳು ಪ್ರಾರಂಭವಾಗುತ್ತದೆ‘ ಎಂದು ಉದಯ್‌ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ಸುರಂಗ ಮಾರ್ಗವು ನದಿಯ ಮೇಲ್ಮೈಯಿಂದ 13 ಮೀಟರ್‌ ಕೆಳಗಿದ್ದು, ಭೂಮಿಯ ಮೇಲ್ಮೈಯಿಂದ 33 ಮೀಟರ್‌ ಕೆಳಗಿದೆ. ಸುರಂಗ ಮಾರ್ಗವನ್ನು ರೈಲು ಹಾದು ಹೋಗಲು ಸುಮಾರು 45 ಸೆಕೆಂಡ್‌ ತೆಗೆದುಕೊಳ್ಳುತ್ತದೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಹಾಗೂ ಸಂಚಾರ ದಟ್ಟಣೆಯನ್ನು ತಪ್ಪಿಸುವುದಕೋಸ್ಕರ ಅಂಡರ್‌ ವಾಟರ್‌ ಮೆಟ್ರೋ ಮಾರ್ಗವನ್ನು ನಿರ್ಮಿಸಲಾಗಿದೆ.

lokesh

Recent Posts

ಎಚ್.ಡಿ.ಕೋಟೆ| ಸ್ಟೇಷನರಿ ಅಂಗಡಿಯಲ್ಲಿ ಬೆಂಕಿ: 15 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಎಚ್.ಡಿ.ಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…

39 mins ago

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

5 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

5 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

5 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

5 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 hours ago