ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್ಪ್ಲೇನಡ್ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ ಕೋಲ್ಕತ್ತ ಮೆಟ್ರೊ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ.
ಈ ಪ್ರಾಯೋಗಿಕ ಸಂಚಾರದಲ್ಲಿ ಎಂಜಿನಿಯರ್ಗಳು ಮತ್ತು ತಂತ್ರಜ್ಞರು ಮಾತ್ರ ಭಾಗವಹಿಸಿದ್ದರು. ಇದೊಂದು ಐತಿಹಾಸಿಕ ಕ್ಷಣವಾಗಿದೆ ಎಂದು ಕೋಲ್ಕತ್ತ ಮೆಟ್ರೊ ರೈಲ್ವೇ ನಿರ್ವಾಹಕ ಪಿ ಉದಯ್ ಕುಮಾರ್ ರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.
‘ಹೌರಾ ಮೈದಾನದಿಂದ ಎಸ್ಪ್ಲೇನಡ್ ಮೆಟ್ರೊ ನಿಲ್ದಾಣದವರೆ ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ. ಮುಂದಿನ ಐದರಿಂದ ಏಳು ತಿಂಗಳವರೆಗೆ ಪ್ರಾಯೋಗಿಕ ಸಂಚಾರವನ್ನು ಮುಂದುವರಿಸಲಾಗುತ್ತದೆ. ಇದಾದ ಬಳಿಕವಷ್ಟೇ ನಿಯಮಿತ ಸೇವೆಗಳು ಪ್ರಾರಂಭವಾಗುತ್ತದೆ‘ ಎಂದು ಉದಯ್ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈ ಸುರಂಗ ಮಾರ್ಗವು ನದಿಯ ಮೇಲ್ಮೈಯಿಂದ 13 ಮೀಟರ್ ಕೆಳಗಿದ್ದು, ಭೂಮಿಯ ಮೇಲ್ಮೈಯಿಂದ 33 ಮೀಟರ್ ಕೆಳಗಿದೆ. ಸುರಂಗ ಮಾರ್ಗವನ್ನು ರೈಲು ಹಾದು ಹೋಗಲು ಸುಮಾರು 45 ಸೆಕೆಂಡ್ ತೆಗೆದುಕೊಳ್ಳುತ್ತದೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಹಾಗೂ ಸಂಚಾರ ದಟ್ಟಣೆಯನ್ನು ತಪ್ಪಿಸುವುದಕೋಸ್ಕರ ಅಂಡರ್ ವಾಟರ್ ಮೆಟ್ರೋ ಮಾರ್ಗವನ್ನು ನಿರ್ಮಿಸಲಾಗಿದೆ.
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…