ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್ಪ್ಲೇನಡ್ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ ಕೋಲ್ಕತ್ತ ಮೆಟ್ರೊ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ.
ಈ ಪ್ರಾಯೋಗಿಕ ಸಂಚಾರದಲ್ಲಿ ಎಂಜಿನಿಯರ್ಗಳು ಮತ್ತು ತಂತ್ರಜ್ಞರು ಮಾತ್ರ ಭಾಗವಹಿಸಿದ್ದರು. ಇದೊಂದು ಐತಿಹಾಸಿಕ ಕ್ಷಣವಾಗಿದೆ ಎಂದು ಕೋಲ್ಕತ್ತ ಮೆಟ್ರೊ ರೈಲ್ವೇ ನಿರ್ವಾಹಕ ಪಿ ಉದಯ್ ಕುಮಾರ್ ರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.
‘ಹೌರಾ ಮೈದಾನದಿಂದ ಎಸ್ಪ್ಲೇನಡ್ ಮೆಟ್ರೊ ನಿಲ್ದಾಣದವರೆ ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ. ಮುಂದಿನ ಐದರಿಂದ ಏಳು ತಿಂಗಳವರೆಗೆ ಪ್ರಾಯೋಗಿಕ ಸಂಚಾರವನ್ನು ಮುಂದುವರಿಸಲಾಗುತ್ತದೆ. ಇದಾದ ಬಳಿಕವಷ್ಟೇ ನಿಯಮಿತ ಸೇವೆಗಳು ಪ್ರಾರಂಭವಾಗುತ್ತದೆ‘ ಎಂದು ಉದಯ್ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈ ಸುರಂಗ ಮಾರ್ಗವು ನದಿಯ ಮೇಲ್ಮೈಯಿಂದ 13 ಮೀಟರ್ ಕೆಳಗಿದ್ದು, ಭೂಮಿಯ ಮೇಲ್ಮೈಯಿಂದ 33 ಮೀಟರ್ ಕೆಳಗಿದೆ. ಸುರಂಗ ಮಾರ್ಗವನ್ನು ರೈಲು ಹಾದು ಹೋಗಲು ಸುಮಾರು 45 ಸೆಕೆಂಡ್ ತೆಗೆದುಕೊಳ್ಳುತ್ತದೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಹಾಗೂ ಸಂಚಾರ ದಟ್ಟಣೆಯನ್ನು ತಪ್ಪಿಸುವುದಕೋಸ್ಕರ ಅಂಡರ್ ವಾಟರ್ ಮೆಟ್ರೋ ಮಾರ್ಗವನ್ನು ನಿರ್ಮಿಸಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…