ಚಿಕ್ಕಮಗಳೂರು : ಮತ್ಸ್ಯ ಜಾತಿಯಲ್ಲೇ ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರದ ಮೀನಿಗೆ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ.
ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯ ಮೀನು ಮಳಿಗೆಗೆ ಇದೇ ಮೊದಲ ಬಾರಿಗೆ ಮಂಗಳೂರಿನಿಂದ ಬಂದ ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರ ಮೀನು ಕಂಡು ಗ್ರಾಹಕರು ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ.
ಪ್ರತಿ ಕೆಜಿಗೆ 600 ರೂ. ನಿಗದಿ ಮಾಡಿದ್ದ ಅಂಗಡಿ ಮಾಲೀಕ ಗ್ರಾಹಕರ ಬೇಡಿಕೆ ಹೆಚ್ಚಿದಂತೆ 1,000 ರೂ. ನಿಗದಿ ಮಾಡಿದ್ದಾನೆ. ಆದರೂ ಗ್ರಾಹಕರು ನಿರುತ್ಸಾಹಗೊಳ್ಳದೇ ಮುಗಿಬಿದ್ದು ಖರೀದಿಸಿದ್ದಾರೆ. ಗ್ರಾಹಕರನ್ನ ಸಂಭಾಳಿಸಲು ಅಂಗಡಿ ಮಾಲೀಕ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೇ ಮೀನು ಖರೀದಿದಾರರ ಜೊತೆ ಬಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.
ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಿಗೆ ಭಾರತದಿಂದ ರಫ್ತಾಗುತ್ತದೆ. ಮೊದಲ ಬಾರಿಗೆ ಚಿಕ್ಕಮಗಳೂರಿನ ಗ್ರಾಹಕರ ಬೇಡಿಕೆಗೆ ಮಣಿದು ಅಂಗಡಿ ಮಾಲೀಕ ತರಿಸಿ ಮಾರಾಟ ಮಾಡಿದ್ದಾನೆ. ಗ್ರಾಹಕರ ಉತ್ಸಾಹ ಹಾಗೂ ಮೀನಿಗೆ ಇರುವ ಬೇಡಿಕೆ ಕಂಡು ಅಂಗಡಿ ಮಾಲೀಕ ಫುಲ್ ಖುಷ್ ಆಗಿದ್ದಾನೆ.
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…