ಚಿಕ್ಕಮಗಳೂರು : ಮತ್ಸ್ಯ ಜಾತಿಯಲ್ಲೇ ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರದ ಮೀನಿಗೆ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ.
ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯ ಮೀನು ಮಳಿಗೆಗೆ ಇದೇ ಮೊದಲ ಬಾರಿಗೆ ಮಂಗಳೂರಿನಿಂದ ಬಂದ ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರ ಮೀನು ಕಂಡು ಗ್ರಾಹಕರು ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ.
ಪ್ರತಿ ಕೆಜಿಗೆ 600 ರೂ. ನಿಗದಿ ಮಾಡಿದ್ದ ಅಂಗಡಿ ಮಾಲೀಕ ಗ್ರಾಹಕರ ಬೇಡಿಕೆ ಹೆಚ್ಚಿದಂತೆ 1,000 ರೂ. ನಿಗದಿ ಮಾಡಿದ್ದಾನೆ. ಆದರೂ ಗ್ರಾಹಕರು ನಿರುತ್ಸಾಹಗೊಳ್ಳದೇ ಮುಗಿಬಿದ್ದು ಖರೀದಿಸಿದ್ದಾರೆ. ಗ್ರಾಹಕರನ್ನ ಸಂಭಾಳಿಸಲು ಅಂಗಡಿ ಮಾಲೀಕ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೇ ಮೀನು ಖರೀದಿದಾರರ ಜೊತೆ ಬಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.
ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಿಗೆ ಭಾರತದಿಂದ ರಫ್ತಾಗುತ್ತದೆ. ಮೊದಲ ಬಾರಿಗೆ ಚಿಕ್ಕಮಗಳೂರಿನ ಗ್ರಾಹಕರ ಬೇಡಿಕೆಗೆ ಮಣಿದು ಅಂಗಡಿ ಮಾಲೀಕ ತರಿಸಿ ಮಾರಾಟ ಮಾಡಿದ್ದಾನೆ. ಗ್ರಾಹಕರ ಉತ್ಸಾಹ ಹಾಗೂ ಮೀನಿಗೆ ಇರುವ ಬೇಡಿಕೆ ಕಂಡು ಅಂಗಡಿ ಮಾಲೀಕ ಫುಲ್ ಖುಷ್ ಆಗಿದ್ದಾನೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…