ಚಿಕ್ಕಮಗಳೂರು : ಮತ್ಸ್ಯ ಜಾತಿಯಲ್ಲೇ ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರದ ಮೀನಿಗೆ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ.
ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯ ಮೀನು ಮಳಿಗೆಗೆ ಇದೇ ಮೊದಲ ಬಾರಿಗೆ ಮಂಗಳೂರಿನಿಂದ ಬಂದ ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರ ಮೀನು ಕಂಡು ಗ್ರಾಹಕರು ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ.
ಪ್ರತಿ ಕೆಜಿಗೆ 600 ರೂ. ನಿಗದಿ ಮಾಡಿದ್ದ ಅಂಗಡಿ ಮಾಲೀಕ ಗ್ರಾಹಕರ ಬೇಡಿಕೆ ಹೆಚ್ಚಿದಂತೆ 1,000 ರೂ. ನಿಗದಿ ಮಾಡಿದ್ದಾನೆ. ಆದರೂ ಗ್ರಾಹಕರು ನಿರುತ್ಸಾಹಗೊಳ್ಳದೇ ಮುಗಿಬಿದ್ದು ಖರೀದಿಸಿದ್ದಾರೆ. ಗ್ರಾಹಕರನ್ನ ಸಂಭಾಳಿಸಲು ಅಂಗಡಿ ಮಾಲೀಕ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೇ ಮೀನು ಖರೀದಿದಾರರ ಜೊತೆ ಬಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.
ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಿಗೆ ಭಾರತದಿಂದ ರಫ್ತಾಗುತ್ತದೆ. ಮೊದಲ ಬಾರಿಗೆ ಚಿಕ್ಕಮಗಳೂರಿನ ಗ್ರಾಹಕರ ಬೇಡಿಕೆಗೆ ಮಣಿದು ಅಂಗಡಿ ಮಾಲೀಕ ತರಿಸಿ ಮಾರಾಟ ಮಾಡಿದ್ದಾನೆ. ಗ್ರಾಹಕರ ಉತ್ಸಾಹ ಹಾಗೂ ಮೀನಿಗೆ ಇರುವ ಬೇಡಿಕೆ ಕಂಡು ಅಂಗಡಿ ಮಾಲೀಕ ಫುಲ್ ಖುಷ್ ಆಗಿದ್ದಾನೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…