BREAKING NEWS

ಎಂಎಸ್‌ ಧೋನಿ ಸೇರಿದಂತೆ ಐವರು ಭಾರತೀಯರಿಗೆ ಸಿಕ್ತು ಎಂಸಿಸಿ ಆಜೀವ ಸದಸ್ಯತ್ವ!

ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್‌ ಧೋನಿ, ಯುವರಾಜ್ ಸಿಂಗ್, ಸುರೇಶ್‌ ರೈನಾ, ಮಿಥಾಲಿ ರಾಜ್‌ ಹಾಗೂ ಜೂಲನ್‌ ಗೋಸ್ವಾಮಿ ಅವರಿಗೆ ಮೆರಿಲ್‌ಬೋನ್ ಕ್ರಿಕೆಟ್‌ ಕ್ಲಬ್‌ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ ಶ್ರೇಷ್ಠ ಕ್ರಿಕೆಟಿಗರಿಗೆ ತನ್ನ ಸದಸ್ಯತ್ವವನ್ನು ನೀಡುತ್ತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ ಪರಿಗಣಿಸಿ ಎಂಎಸ್‌ ಧೋನಿ, ಯುವರಾಜ್‌ ಸಿಂಗ್, ಸುರೇಶ್‌ ರೈನಾ ಸೇರಿದಂತೆ ಐವರು ಭಾರತೀಯ ದಿಗ್ಗಜರಿಗೆ ಎಂಸಿಸಿ ತನ್ನ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಇದರ ಜೊತೆಗೆ ಟೆಸ್ಟ್‌ ಕ್ರಿಕೆಟ್‌ ಆಡುವ 8 ರಾಷ್ಟ್ರಗಳಿಂದ ಒಟ್ಟು 19 ಆಟಗಾರರಿಗೆ ಎಂಸಿಸಿ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ.
ಭಾರತ ಮಹಿಳಾ ಕ್ರಿಕೆಟ್‌ ತಂಡದ ಮಾಜಿ ವೇಗಿ ಜೂಲನ್‌ ಗೋಸ್ವಾಮಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇವರ ಮಾಜಿ ಸಹ ಆಟಗಾರ್ತಿ ಹಾಗೂ ಬ್ಯಾಟಿಂಗ್‌ ದಿಗ್ಗಜೆ ಮಿಥಾಲಿ ರಾಜ್‌ ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ 211 ಇನಿಂಗ್ಸ್‌ಗಳಿಂದ 7,805 ರನ್‌ ಗಳಿಸಿದ್ದಾರೆ.
2007 ಮತ್ತು 2011ರ ಐಸಿಸಿ ವಿಶ್ವಕಪ್‌ ಟೂರ್ನಿಗಳಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಎಸ್‌ ಧೋನಿ ಹಾಗೂ ಯುವರಾಜ್‌ ಸಿಂಗ್‌ ಅವರಿಗೆ ಎಂಸಿಸಿ ಆಜೀವ ಸದಸ್ಯತ್ವವನ್ನು ನೀಡಿದೆ. ಇನ್ನು ಭಾರತ ತಂಡದ ಮಾಜಿ ಆಲ್‌ರೌಂಡರ್‌ ಸುರೇಶ್‌ ರೈನಾ, ಏಕದಿನ ಕ್ರಿಕೆಟ್‌ನಲ್ಲಿ 5,500 ರನ್‌ಗಳನ್ನು ಗಳಿಸಿದ್ದಾರೆ.
“ನಾವು ಹೊಸ ಅಂತಾರಾಷ್ಟ್ರೀಯ ಬೇಸಿಗೆಗಾಗಿ ತಯಾರಿ ನಡೆಸುತ್ತಿರುವಾಗ, ಎಂಸಿಸಿಯ ಗೌರವಾನ್ವಿತ ಆಜೀವ ಸದಸ್ಯರನ್ನು ಘೋಷಿಸಲು ರೋಮಾಂಚನಗೊಂಡಿದ್ದೇವೆ. ಇಂದು(ಬುಧವಾರ) ಘೋಷಿಸಿದ ಹೆಸರುಗಳು ಆಧುನಿಕ ಕ್ರಿಕೆಟ್‌ನ ಕೆಲ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರರಾಗಿದ್ದು, ಈಗ ಅವರನ್ನು ನಮ್ಮ ಕ್ಲಬ್‌ನ ಮೌಲ್ಯಯುತ ಸದಸ್ಯರನ್ನಾಗಿ ಪರಿಗಣಿಸಲು ಸಂತಸವಾಗುತ್ತಿದೆ,” ಎಂದು ಎಂಸಿಸಿಯ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿಯಾಗಿರುವ ಗೈ ಲ್ಯಾವೆಂಡರ್ ಹೇಳಿದ್ದಾರೆ.

lokesh

Recent Posts

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

28 mins ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

1 hour ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

1 hour ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

3 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

3 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

3 hours ago