BREAKING NEWS

ಎಂಎಸ್‌ ಧೋನಿ ಸೇರಿದಂತೆ ಐವರು ಭಾರತೀಯರಿಗೆ ಸಿಕ್ತು ಎಂಸಿಸಿ ಆಜೀವ ಸದಸ್ಯತ್ವ!

ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್‌ ಧೋನಿ, ಯುವರಾಜ್ ಸಿಂಗ್, ಸುರೇಶ್‌ ರೈನಾ, ಮಿಥಾಲಿ ರಾಜ್‌ ಹಾಗೂ ಜೂಲನ್‌ ಗೋಸ್ವಾಮಿ ಅವರಿಗೆ ಮೆರಿಲ್‌ಬೋನ್ ಕ್ರಿಕೆಟ್‌ ಕ್ಲಬ್‌ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ ಶ್ರೇಷ್ಠ ಕ್ರಿಕೆಟಿಗರಿಗೆ ತನ್ನ ಸದಸ್ಯತ್ವವನ್ನು ನೀಡುತ್ತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ ಪರಿಗಣಿಸಿ ಎಂಎಸ್‌ ಧೋನಿ, ಯುವರಾಜ್‌ ಸಿಂಗ್, ಸುರೇಶ್‌ ರೈನಾ ಸೇರಿದಂತೆ ಐವರು ಭಾರತೀಯ ದಿಗ್ಗಜರಿಗೆ ಎಂಸಿಸಿ ತನ್ನ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಇದರ ಜೊತೆಗೆ ಟೆಸ್ಟ್‌ ಕ್ರಿಕೆಟ್‌ ಆಡುವ 8 ರಾಷ್ಟ್ರಗಳಿಂದ ಒಟ್ಟು 19 ಆಟಗಾರರಿಗೆ ಎಂಸಿಸಿ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ.
ಭಾರತ ಮಹಿಳಾ ಕ್ರಿಕೆಟ್‌ ತಂಡದ ಮಾಜಿ ವೇಗಿ ಜೂಲನ್‌ ಗೋಸ್ವಾಮಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇವರ ಮಾಜಿ ಸಹ ಆಟಗಾರ್ತಿ ಹಾಗೂ ಬ್ಯಾಟಿಂಗ್‌ ದಿಗ್ಗಜೆ ಮಿಥಾಲಿ ರಾಜ್‌ ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ 211 ಇನಿಂಗ್ಸ್‌ಗಳಿಂದ 7,805 ರನ್‌ ಗಳಿಸಿದ್ದಾರೆ.
2007 ಮತ್ತು 2011ರ ಐಸಿಸಿ ವಿಶ್ವಕಪ್‌ ಟೂರ್ನಿಗಳಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಎಸ್‌ ಧೋನಿ ಹಾಗೂ ಯುವರಾಜ್‌ ಸಿಂಗ್‌ ಅವರಿಗೆ ಎಂಸಿಸಿ ಆಜೀವ ಸದಸ್ಯತ್ವವನ್ನು ನೀಡಿದೆ. ಇನ್ನು ಭಾರತ ತಂಡದ ಮಾಜಿ ಆಲ್‌ರೌಂಡರ್‌ ಸುರೇಶ್‌ ರೈನಾ, ಏಕದಿನ ಕ್ರಿಕೆಟ್‌ನಲ್ಲಿ 5,500 ರನ್‌ಗಳನ್ನು ಗಳಿಸಿದ್ದಾರೆ.
“ನಾವು ಹೊಸ ಅಂತಾರಾಷ್ಟ್ರೀಯ ಬೇಸಿಗೆಗಾಗಿ ತಯಾರಿ ನಡೆಸುತ್ತಿರುವಾಗ, ಎಂಸಿಸಿಯ ಗೌರವಾನ್ವಿತ ಆಜೀವ ಸದಸ್ಯರನ್ನು ಘೋಷಿಸಲು ರೋಮಾಂಚನಗೊಂಡಿದ್ದೇವೆ. ಇಂದು(ಬುಧವಾರ) ಘೋಷಿಸಿದ ಹೆಸರುಗಳು ಆಧುನಿಕ ಕ್ರಿಕೆಟ್‌ನ ಕೆಲ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರರಾಗಿದ್ದು, ಈಗ ಅವರನ್ನು ನಮ್ಮ ಕ್ಲಬ್‌ನ ಮೌಲ್ಯಯುತ ಸದಸ್ಯರನ್ನಾಗಿ ಪರಿಗಣಿಸಲು ಸಂತಸವಾಗುತ್ತಿದೆ,” ಎಂದು ಎಂಸಿಸಿಯ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿಯಾಗಿರುವ ಗೈ ಲ್ಯಾವೆಂಡರ್ ಹೇಳಿದ್ದಾರೆ.

lokesh

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

9 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

9 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

9 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

10 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

11 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

11 hours ago