BREAKING NEWS

ಎಂಎಸ್‌ ಧೋನಿ ಸೇರಿದಂತೆ ಐವರು ಭಾರತೀಯರಿಗೆ ಸಿಕ್ತು ಎಂಸಿಸಿ ಆಜೀವ ಸದಸ್ಯತ್ವ!

ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್‌ ಧೋನಿ, ಯುವರಾಜ್ ಸಿಂಗ್, ಸುರೇಶ್‌ ರೈನಾ, ಮಿಥಾಲಿ ರಾಜ್‌ ಹಾಗೂ ಜೂಲನ್‌ ಗೋಸ್ವಾಮಿ ಅವರಿಗೆ ಮೆರಿಲ್‌ಬೋನ್ ಕ್ರಿಕೆಟ್‌ ಕ್ಲಬ್‌ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ ಶ್ರೇಷ್ಠ ಕ್ರಿಕೆಟಿಗರಿಗೆ ತನ್ನ ಸದಸ್ಯತ್ವವನ್ನು ನೀಡುತ್ತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ ಪರಿಗಣಿಸಿ ಎಂಎಸ್‌ ಧೋನಿ, ಯುವರಾಜ್‌ ಸಿಂಗ್, ಸುರೇಶ್‌ ರೈನಾ ಸೇರಿದಂತೆ ಐವರು ಭಾರತೀಯ ದಿಗ್ಗಜರಿಗೆ ಎಂಸಿಸಿ ತನ್ನ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಇದರ ಜೊತೆಗೆ ಟೆಸ್ಟ್‌ ಕ್ರಿಕೆಟ್‌ ಆಡುವ 8 ರಾಷ್ಟ್ರಗಳಿಂದ ಒಟ್ಟು 19 ಆಟಗಾರರಿಗೆ ಎಂಸಿಸಿ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ.
ಭಾರತ ಮಹಿಳಾ ಕ್ರಿಕೆಟ್‌ ತಂಡದ ಮಾಜಿ ವೇಗಿ ಜೂಲನ್‌ ಗೋಸ್ವಾಮಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇವರ ಮಾಜಿ ಸಹ ಆಟಗಾರ್ತಿ ಹಾಗೂ ಬ್ಯಾಟಿಂಗ್‌ ದಿಗ್ಗಜೆ ಮಿಥಾಲಿ ರಾಜ್‌ ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ 211 ಇನಿಂಗ್ಸ್‌ಗಳಿಂದ 7,805 ರನ್‌ ಗಳಿಸಿದ್ದಾರೆ.
2007 ಮತ್ತು 2011ರ ಐಸಿಸಿ ವಿಶ್ವಕಪ್‌ ಟೂರ್ನಿಗಳಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಎಸ್‌ ಧೋನಿ ಹಾಗೂ ಯುವರಾಜ್‌ ಸಿಂಗ್‌ ಅವರಿಗೆ ಎಂಸಿಸಿ ಆಜೀವ ಸದಸ್ಯತ್ವವನ್ನು ನೀಡಿದೆ. ಇನ್ನು ಭಾರತ ತಂಡದ ಮಾಜಿ ಆಲ್‌ರೌಂಡರ್‌ ಸುರೇಶ್‌ ರೈನಾ, ಏಕದಿನ ಕ್ರಿಕೆಟ್‌ನಲ್ಲಿ 5,500 ರನ್‌ಗಳನ್ನು ಗಳಿಸಿದ್ದಾರೆ.
“ನಾವು ಹೊಸ ಅಂತಾರಾಷ್ಟ್ರೀಯ ಬೇಸಿಗೆಗಾಗಿ ತಯಾರಿ ನಡೆಸುತ್ತಿರುವಾಗ, ಎಂಸಿಸಿಯ ಗೌರವಾನ್ವಿತ ಆಜೀವ ಸದಸ್ಯರನ್ನು ಘೋಷಿಸಲು ರೋಮಾಂಚನಗೊಂಡಿದ್ದೇವೆ. ಇಂದು(ಬುಧವಾರ) ಘೋಷಿಸಿದ ಹೆಸರುಗಳು ಆಧುನಿಕ ಕ್ರಿಕೆಟ್‌ನ ಕೆಲ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರರಾಗಿದ್ದು, ಈಗ ಅವರನ್ನು ನಮ್ಮ ಕ್ಲಬ್‌ನ ಮೌಲ್ಯಯುತ ಸದಸ್ಯರನ್ನಾಗಿ ಪರಿಗಣಿಸಲು ಸಂತಸವಾಗುತ್ತಿದೆ,” ಎಂದು ಎಂಸಿಸಿಯ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿಯಾಗಿರುವ ಗೈ ಲ್ಯಾವೆಂಡರ್ ಹೇಳಿದ್ದಾರೆ.

lokesh

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago