ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್ ಧೋನಿ, ಯುವರಾಜ್ ಸಿಂಗ್, ಸುರೇಶ್ ರೈನಾ, ಮಿಥಾಲಿ ರಾಜ್ ಹಾಗೂ ಜೂಲನ್ ಗೋಸ್ವಾಮಿ ಅವರಿಗೆ ಮೆರಿಲ್ಬೋನ್ ಕ್ರಿಕೆಟ್ ಕ್ಲಬ್ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ ಶ್ರೇಷ್ಠ ಕ್ರಿಕೆಟಿಗರಿಗೆ ತನ್ನ ಸದಸ್ಯತ್ವವನ್ನು ನೀಡುತ್ತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ದೊಡ್ಡ ಸಾಧನೆ ಪರಿಗಣಿಸಿ ಎಂಎಸ್ ಧೋನಿ, ಯುವರಾಜ್ ಸಿಂಗ್, ಸುರೇಶ್ ರೈನಾ ಸೇರಿದಂತೆ ಐವರು ಭಾರತೀಯ ದಿಗ್ಗಜರಿಗೆ ಎಂಸಿಸಿ ತನ್ನ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಇದರ ಜೊತೆಗೆ ಟೆಸ್ಟ್ ಕ್ರಿಕೆಟ್ ಆಡುವ 8 ರಾಷ್ಟ್ರಗಳಿಂದ ಒಟ್ಟು 19 ಆಟಗಾರರಿಗೆ ಎಂಸಿಸಿ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ವೇಗಿ ಜೂಲನ್ ಗೋಸ್ವಾಮಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಕಬಳಿಸಿದ್ದಾರೆ. ಇವರ ಮಾಜಿ ಸಹ ಆಟಗಾರ್ತಿ ಹಾಗೂ ಬ್ಯಾಟಿಂಗ್ ದಿಗ್ಗಜೆ ಮಿಥಾಲಿ ರಾಜ್ ಮಹಿಳಾ ಒಡಿಐ ಕ್ರಿಕೆಟ್ನಲ್ಲಿ 211 ಇನಿಂಗ್ಸ್ಗಳಿಂದ 7,805 ರನ್ ಗಳಿಸಿದ್ದಾರೆ.
2007 ಮತ್ತು 2011ರ ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಎಸ್ ಧೋನಿ ಹಾಗೂ ಯುವರಾಜ್ ಸಿಂಗ್ ಅವರಿಗೆ ಎಂಸಿಸಿ ಆಜೀವ ಸದಸ್ಯತ್ವವನ್ನು ನೀಡಿದೆ. ಇನ್ನು ಭಾರತ ತಂಡದ ಮಾಜಿ ಆಲ್ರೌಂಡರ್ ಸುರೇಶ್ ರೈನಾ, ಏಕದಿನ ಕ್ರಿಕೆಟ್ನಲ್ಲಿ 5,500 ರನ್ಗಳನ್ನು ಗಳಿಸಿದ್ದಾರೆ.
“ನಾವು ಹೊಸ ಅಂತಾರಾಷ್ಟ್ರೀಯ ಬೇಸಿಗೆಗಾಗಿ ತಯಾರಿ ನಡೆಸುತ್ತಿರುವಾಗ, ಎಂಸಿಸಿಯ ಗೌರವಾನ್ವಿತ ಆಜೀವ ಸದಸ್ಯರನ್ನು ಘೋಷಿಸಲು ರೋಮಾಂಚನಗೊಂಡಿದ್ದೇವೆ. ಇಂದು(ಬುಧವಾರ) ಘೋಷಿಸಿದ ಹೆಸರುಗಳು ಆಧುನಿಕ ಕ್ರಿಕೆಟ್ನ ಕೆಲ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರರಾಗಿದ್ದು, ಈಗ ಅವರನ್ನು ನಮ್ಮ ಕ್ಲಬ್ನ ಮೌಲ್ಯಯುತ ಸದಸ್ಯರನ್ನಾಗಿ ಪರಿಗಣಿಸಲು ಸಂತಸವಾಗುತ್ತಿದೆ,” ಎಂದು ಎಂಸಿಸಿಯ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿಯಾಗಿರುವ ಗೈ ಲ್ಯಾವೆಂಡರ್ ಹೇಳಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…