ಮಂಡ್ಯ : ಸ್ನಾನ ಮಾಡಲೆಂದು ನಾಲೆಗೆ ಇಳಿದಿದ್ದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಸಮೀಪವಿರುವ ವಿ.ನಾಲೆಯಲ್ಲಿ ಮಂಗಳವಾರ ನಡೆದಿದೆ.
ಬೆಂಗಳೂರಿನ ನೀಲಸಂದ್ರ ಮೂಲದವರಾದ ಅತೀಕ (22), ಅನೀಸ ಬೇಗಂ (34), ತಸ್ಮಿಯ (22), ಮಹತಾಬ್ (10) ಮತ್ತು ಹರ್ಷಕ್ ಮೃತ ದುರ್ದೈವಿಗಳು.
ತಾಲೂಕಿನ ಹಲಗೆರೆ ಗ್ರಾಮಕ್ಕೆ ನೀಲಸಂದ್ರ ದಿಂದ ಬಂದಿದ್ದ 15 ಜನರ ತಂಡ ಮಂಗಳವಾರ ಸ್ನಾನ ಮಾಡಲೆಂದು ವಿ.ನಾಲೆಗೆ ಇಳಿದಿದ್ದಾರೆ. ಈ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದದ್ದನ್ನು ನೋಡಿದ ಉಳಿದವರು ಆತನ ರಕ್ಷಣೆಗೆಂದು ಹೋದಾಗ ಬಾಲಕ ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ.
ಇವರ ಪೈಕಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನಿಬ್ಬರ ಮೃತ ದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ
ಈ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…