BREAKING NEWS

ಫುಟ್‌ಬಾಲ್‌ ದಿಗ್ಗಜ ಪೀಲೆ ಇನ್ನಿಲ್ಲ

ರಿಯೊ ಡಿ ಜನೈರೊ, ಬ್ರೆಜಿಲ್: ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೀಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು.

ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು  ಅವರ ಆಟವು ಪ್ರಮುಖವಾಗಿತ್ತು. ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು ಗಳಿಸಿದ (77) ಅವರ ದಾಖಲೆಯನ್ನು ಈಚೆಗೆ ನಡೆದ ವಿಶ್ವಕಪ್ ಟೂರ್ನಿಯಲ್ಲಿ ನೇಮರ್ ಸರಿಗಟ್ಟಿದ್ದರು.

‘ಪೆಲೆಗೆ ನೀಡುತ್ತಿರುವ ಕಿಮೊಥೆರಪಿ ಪರಿಣಾಮ ಬೀರುತ್ತಿಲ್ಲ. ಆದ್ದರಿಂದ ಅವರನ್ನು ಪ್ಯಾಲೆಟಿವ್‌ ಕೇರ್‌ ವಿಭಾಗದಲ್ಲಿ ದಾಖಲಿಸಲಾಗಿದೆ’ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಅದನ್ನು ಕುಟುಂಬದ ಸದಸ್ಯರು ಅಲ್ಲಗಳೆದಿದ್ದರು.

ನವೆಂಬರ್‌ ಕೊನೆಯ ವಾರದಲ್ಲಿ  ಅಲ್ಬರ್ಟ್‌ ಐನ್‌ಸ್ಟೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕರುಳಿನ ಕ್ಯಾನ್ಸರ್‌ ಉಲ್ಬಣಿಸಿದ್ದು ಮೂತ್ರಪಿಂಡ ಮತ್ತು ಹೃದಯಕ್ಕೆ ಸೋಂಕು ವ್ಯಾಪಿಸಿದೆ ಎಂದು ಈಚೆಗೆ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. 1957ರಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅವರು ವೃತ್ತಿಜೀವನದಲ್ಲಿ 1000ಕ್ಕೂ ಹೆಚ್ಚು ಗೋಲುಗಳನ್ನು ದಾಖಲಿಸಿದ್ದರು. 1977ರಲ್ಲಿ ನಿವೃತ್ತರಾಗಿದ್ದರು.

ಫಾರ್ವರ್ಡ್ ಮತ್ತು ಅಟ್ಯಾಕಿಂಗ್ ಮಿಡ್‌ಫೀಲ್ಡರ್ ಆಟಗಾರರಾಗಿದ್ದ ಪೆಲೆ, 1995–1998ರ ಅವಧಿಯಲ್ಲಿ ದೇಶದ ಕ್ರೀಡಾ ಸಚಿವರಾಗಿದ್ದರು. ವಿಶ್ವಕಪ್ ಟೂರ್ನಿಗಳ 14 ಪಂದ್ಯಗಳಲ್ಲಿ 12 ಗೋಲುಗಳನ್ನು ಗಳಿಸಿದ್ದರು. ಪ್ರಮುಖವಾಗಿ ಸ್ಯಾಂಟೊಸ್‌ ಮತ್ತು ನ್ಯೂಯಾರ್ಕ್ ಕಾಸ್ಮೊಸ್‌ ಕ್ಲಬ್‌ಗಳಿಗೆ ಆಡಿದ್ದರು.

 

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

13 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

13 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

14 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

15 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

15 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

15 hours ago