BREAKING NEWS

ಫುಟ್‌ಬಾಲ್‌ ದಿಗ್ಗಜ ಪೀಲೆ ಇನ್ನಿಲ್ಲ

ರಿಯೊ ಡಿ ಜನೈರೊ, ಬ್ರೆಜಿಲ್: ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೀಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು.

ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು  ಅವರ ಆಟವು ಪ್ರಮುಖವಾಗಿತ್ತು. ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು ಗಳಿಸಿದ (77) ಅವರ ದಾಖಲೆಯನ್ನು ಈಚೆಗೆ ನಡೆದ ವಿಶ್ವಕಪ್ ಟೂರ್ನಿಯಲ್ಲಿ ನೇಮರ್ ಸರಿಗಟ್ಟಿದ್ದರು.

‘ಪೆಲೆಗೆ ನೀಡುತ್ತಿರುವ ಕಿಮೊಥೆರಪಿ ಪರಿಣಾಮ ಬೀರುತ್ತಿಲ್ಲ. ಆದ್ದರಿಂದ ಅವರನ್ನು ಪ್ಯಾಲೆಟಿವ್‌ ಕೇರ್‌ ವಿಭಾಗದಲ್ಲಿ ದಾಖಲಿಸಲಾಗಿದೆ’ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಅದನ್ನು ಕುಟುಂಬದ ಸದಸ್ಯರು ಅಲ್ಲಗಳೆದಿದ್ದರು.

ನವೆಂಬರ್‌ ಕೊನೆಯ ವಾರದಲ್ಲಿ  ಅಲ್ಬರ್ಟ್‌ ಐನ್‌ಸ್ಟೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕರುಳಿನ ಕ್ಯಾನ್ಸರ್‌ ಉಲ್ಬಣಿಸಿದ್ದು ಮೂತ್ರಪಿಂಡ ಮತ್ತು ಹೃದಯಕ್ಕೆ ಸೋಂಕು ವ್ಯಾಪಿಸಿದೆ ಎಂದು ಈಚೆಗೆ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. 1957ರಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅವರು ವೃತ್ತಿಜೀವನದಲ್ಲಿ 1000ಕ್ಕೂ ಹೆಚ್ಚು ಗೋಲುಗಳನ್ನು ದಾಖಲಿಸಿದ್ದರು. 1977ರಲ್ಲಿ ನಿವೃತ್ತರಾಗಿದ್ದರು.

ಫಾರ್ವರ್ಡ್ ಮತ್ತು ಅಟ್ಯಾಕಿಂಗ್ ಮಿಡ್‌ಫೀಲ್ಡರ್ ಆಟಗಾರರಾಗಿದ್ದ ಪೆಲೆ, 1995–1998ರ ಅವಧಿಯಲ್ಲಿ ದೇಶದ ಕ್ರೀಡಾ ಸಚಿವರಾಗಿದ್ದರು. ವಿಶ್ವಕಪ್ ಟೂರ್ನಿಗಳ 14 ಪಂದ್ಯಗಳಲ್ಲಿ 12 ಗೋಲುಗಳನ್ನು ಗಳಿಸಿದ್ದರು. ಪ್ರಮುಖವಾಗಿ ಸ್ಯಾಂಟೊಸ್‌ ಮತ್ತು ನ್ಯೂಯಾರ್ಕ್ ಕಾಸ್ಮೊಸ್‌ ಕ್ಲಬ್‌ಗಳಿಗೆ ಆಡಿದ್ದರು.

 

andolanait

Recent Posts

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

20 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

54 mins ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

4 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

5 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

20 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

23 hours ago