ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ.
ವಿರೋಧ ಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು. ಅವರು ನಡವಳಿಕೆ ಸರಿಯಿರದಿದ್ದ ಕಾರಣ, ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು, ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ , ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜಿನಾಮೆ ನೀಡಿದರೆ, ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…