BREAKING NEWS

ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಬಂದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ.

ವಿರೋಧ ಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು. ಅವರು ನಡವಳಿಕೆ ಸರಿಯಿರದಿದ್ದ ಕಾರಣ, ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು, ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ , ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜಿನಾಮೆ ನೀಡಿದರೆ, ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

8 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

9 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago