ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ.
ವಿರೋಧ ಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು. ಅವರು ನಡವಳಿಕೆ ಸರಿಯಿರದಿದ್ದ ಕಾರಣ, ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು, ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ , ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜಿನಾಮೆ ನೀಡಿದರೆ, ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…