ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ ಮಾಡುವುದು ಸರಿಯಾದ ಕ್ರಮ ಅಲ್ಲ. ನೂರಾರು ವರ್ಷಗಳಿಂದ ಇಂತಹ ವಸ್ತುಗಳ ಸಂಗ್ರಹ ಇದೆ. ಹಾಗೆ ಸಂಗ್ರಹಿಸಿಟ್ಟವರನ್ನೆಲ್ಲ ಬಂಧಿಸಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
ವನ್ಯಜೀವಿ ರಕ್ಷಣಾ ಕಾಯ್ದೆ ಬರುವ ಮೊದಲು ಹುಲಿ ಉಗುರು, ವನ್ಯ ಪ್ರಾಣಿಗಳ ವಸ್ತುಗಳು ಮಲೆನಾಡು, ಕರಾವಳಿ ಭಾಗದಲ್ಲಿ ಅಲಂಕಾರಿಕ ವಸ್ತುವಾಗಿತ್ತು. ಮಕ್ಕಳಿಗೆ ಹುಲಿ ಉಗುರು ತೊಡಿಸುತ್ತಿದ್ದರು. ಏಕಾಏಕಿ ವ್ಯಕ್ತಿಗಳನ್ನು ಬಂಧನ ಮಾಡಿದರೆ ಜೈಲುಗಳಲ್ಲಿ ಸ್ಥಳ ಸಾಕಾಗುವುದಿಲ್ಲ ಎಂದು ಹೇಳಿದರು.
ವನ್ಯಜೀವಿ ರಕ್ಷಣಾ ಕಾಯ್ದೆಗೆ ನಾನು ವಿರೋಧಿ ಅಲ್ಲ. ಆದರೆ ಹಿಂದಿನ ಕಾಲದಿಂದಲೂ ಮನೆಯಲ್ಲಿ ಉಗುರು ಇಟ್ಟಿರುವವರನ್ನೆಲ್ಲ ಬಂಧಿಸುವುದು ಸರಿಯಲ್ಲ. ಈ ಬಗ್ಗೆ ಸರ್ಕಾರ ಚರ್ಚೆ ನಡೆಸಬೇಕು ಎಂದು ಜ್ಞಾನೇಂದ್ರ ಆಗ್ರಹಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…