ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.
ಯಾವೆಲ್ಲಾ ಅಂಶಗಳ ತನಿಖೆ : ಯೋಜನೆ, ಕಾಮಗಾರಿಗಳಿಗೆ ನಿಯಮಾನುಸಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆಯೇ?
ಅನುಷ್ಠಾನಗೊಳಿಸಿದ ಕಾಮಗಾರಿ, ಯೋಜನೆಗಳ ಗುಣಮಟ್ಟ, ಕಾಮಗಾರಿಗಳ ಅಂದಾಜುಗಳನ್ನು ಪ್ರಚಲಿತ ಅನುಸೂಚಿ ದರಗಳ (ಎಸ್ಆರ್) ಅನುಸಾರ ತಯಾರಿಸಲಾಗಿದೆಯೇ?
-ಕಾಮಗಾರಿಗಳ ಅಂದಾಜಿನಲ್ಲಿರುವ ಪ್ರಮಾಣ ವಾಸ್ತ ವಿಕವಾಗಿದೆಯೇ? ಕೃತಕವಾಗಿ ಹೆಚ್ಚಿಸಲಾಗಿದೆಯೇ? ಹೆಚ್ಚಿಸಿದ್ದರೆ ಅವುಗಳ ಪ್ರಮಾಣ ಮತ್ತು ಹಣಕಾಸಿನ ಬದ್ಧತೆಯ ಜೊತೆಗೆ ಯಾವ ಹಂತದಲ್ಲಿದೆ ಎಂಬುದನ್ನು ಪರೀಕ್ಷಿಸುವುದು
-ಈ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಿರುವ ಹೆಚ್ಚುವರಿ ವ್ಯತ್ಯಾಸದ ಅನಿವಾರ್ಯ ಮತ್ತು ಅಗತ್ಯ. ಅನಿವಾರ್ಯವಾಗಿದ್ದರೆ ಮೂಲ ಅಂದಾಜಿನಲ್ಲಿ ಕೈಬಿಡಲು ಕಾರಣಗಳು ಮತ್ತು ಅವುಗಳಿಗೆ ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿರುವ ಬಗ್ಗೆ ಯಾವುದಾದರೂ ಕಾಮಗಾರಿಗಳನ್ನು ನಿರ್ವಹಿಸದೇ ಬಿಲ್ ಮಾಡಲಾಗಿದೆಯೇ? ಅನುಷ್ಠಾನದ ಕಾಮಗಾರಿಗಳ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಬಿಲ್ ವತಿಸಲಾಗಿದೆಯೇ?
-ಕಾಮಗಾರಿಗಳ ಟೆಂಡರ್ಗಳನ್ನು ಕರೆಯುವಾಗ ಕೆಲವೇ ಗುತ್ತಿಗೆದಾರರಿಗೆ ಅನುಕೂಲ ಆಗುವಂತೆ ಹಾಗೂ ಉಳಿದ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಷರತ್ತು ರೂಪಿಸಲಾಗಿತ್ತೇ?
ಇನ್ನು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ,ಅನುಷ್ಠಾನ ಪ್ರಕ್ರಿಯೆಗಳಲ್ಲಿ ಉಂಟಾಗಿರಬಹುದಾದ ಇತರ ಯಾವುದಾದರೂ ಲೋಪದೋಷಗಳು ಬಗ್ಗೆ ಸಮಿತಿ ತನಿಖೆ ನಡೆಸಲಿದೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…