BREAKING NEWS

ಬಿಜೆಪಿ ಅವಧಿಯ ಶೇ.40% ಲಂಚ ಪ್ರಕರಣ ತನಿಖೆಗೆ ನ್ಯಾ.ನಾಗಮೋಹನ್‍ದಾಸ್ ನೇತೃತ್ವದ ಸಮಿತಿ‌ ರಚನೆ

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.‌

ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

ಯಾವೆಲ್ಲಾ ಅಂಶಗಳ ತನಿಖೆ : ಯೋಜನೆ, ಕಾಮಗಾರಿಗಳಿಗೆ ನಿಯಮಾನುಸಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆಯೇ?

ಅನುಷ್ಠಾನಗೊಳಿಸಿದ ಕಾಮಗಾರಿ, ಯೋಜನೆಗಳ ಗುಣಮಟ್ಟ, ಕಾಮಗಾರಿಗಳ ಅಂದಾಜುಗಳನ್ನು ಪ್ರಚಲಿತ ಅನುಸೂಚಿ ದರಗಳ (ಎಸ್‌ಆರ್) ಅನುಸಾರ ತಯಾರಿಸಲಾಗಿದೆಯೇ?

-ಕಾಮಗಾರಿಗಳ ಅಂದಾಜಿನಲ್ಲಿರುವ ಪ್ರಮಾಣ ವಾಸ್ತ ವಿಕವಾಗಿದೆಯೇ? ಕೃತಕವಾಗಿ ಹೆಚ್ಚಿಸಲಾಗಿದೆಯೇ? ಹೆಚ್ಚಿಸಿದ್ದರೆ ಅವುಗಳ ಪ್ರಮಾಣ ಮತ್ತು ಹಣಕಾಸಿನ ಬದ್ಧತೆಯ ಜೊತೆಗೆ ಯಾವ ಹಂತದಲ್ಲಿದೆ ಎಂಬುದನ್ನು ಪರೀಕ್ಷಿಸುವುದು

-ಈ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಿರುವ ಹೆಚ್ಚುವರಿ ವ್ಯತ್ಯಾಸದ ಅನಿವಾರ್ಯ ಮತ್ತು ಅಗತ್ಯ. ಅನಿವಾರ್ಯವಾಗಿದ್ದರೆ ಮೂಲ ಅಂದಾಜಿನಲ್ಲಿ ಕೈಬಿಡಲು ಕಾರಣಗಳು ಮತ್ತು ಅವುಗಳಿಗೆ ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿರುವ ಬಗ್ಗೆ ಯಾವುದಾದರೂ ಕಾಮಗಾರಿಗಳನ್ನು ನಿರ್ವಹಿಸದೇ ಬಿಲ್ ಮಾಡಲಾಗಿದೆಯೇ? ಅನುಷ್ಠಾನದ ಕಾಮಗಾರಿಗಳ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಬಿಲ್ ವತಿಸಲಾಗಿದೆಯೇ?

-ಕಾಮಗಾರಿಗಳ ಟೆಂಡರ್‌ಗಳನ್ನು ಕರೆಯುವಾಗ ಕೆಲವೇ ಗುತ್ತಿಗೆದಾರರಿಗೆ ಅನುಕೂಲ ಆಗುವಂತೆ ಹಾಗೂ ಉಳಿದ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಷರತ್ತು ರೂಪಿಸಲಾಗಿತ್ತೇ?

ಇ‌ನ್ನು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ,ಅನುಷ್ಠಾನ ಪ್ರಕ್ರಿಯೆಗಳಲ್ಲಿ ಉಂಟಾಗಿರಬಹುದಾದ ಇತರ ಯಾವುದಾದರೂ ಲೋಪದೋಷಗಳು ಬಗ್ಗೆ ಸಮಿತಿ ತ‌ನಿಖೆ‌ ನಡೆಸಲಿದೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago