BREAKING NEWS

ಸ್ವಾಯತ್ತ ಕೊಡಗಿಗೆ ಆಯೋಗ ರಚನೆ ವಿಚಾರ : ಏಪ್ರಿಲ್‌ 17 ಕ್ಕೆ ಹೈಕೋರ್ಟ್‌ ನಲ್ಲಿ ವಿಚಾರಣೆ

ಬೆಂಗಳೂರು : ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಕಲ್ಪಿಸುವಂತೆ ಕೊಡವ ಕೌನ್ಸಿಲ್‌ ( ಸಿಎನ್ ಸಿ ) ಸಲ್ಲಿಸಿರುವ ಬೇಡಿಕೆಯ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ( ಪಿಐಎಲ್)‌ ಯ ವಿಚಾರಣೆಯನ್ನು ಹೈಕೋರ್ಟ್‌ ಏಪ್ರಿಲ್‌ 17 ಕ್ಕೆ ನಿಗಧಿ ಪಡಿಸಿದೆ.
ಈ ಬಗ್ಗೆ ರಾಜ್ಯಸಭಾ ಸದಸ್ಯರಾದ ಡಾ.ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ.ಗುರುವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿದ್ದ ಅವರು,ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಕೋರಿ ಮೆಮೊ ಸಲ್ಲಿಸಿದ್ದರು.ಆ ಮೆಮೊ ಸ್ವೀಕರಿಸಿದ ನ್ಯಾಯಪೀಠ ಇದೇ ಏಪ್ರಿಲ್‌ 17 ಕ್ಕೆ ವಿಚಾರಣೆ ನಿಗಧಿಪಡಿಸಿತ್ತು,ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆ ಹೊಂದಿದ್ದಾರೆ.ಇದರಿಂದ ಸಂವಿಧಾನದ ಪರಿಚ್ಛೇದ 242 ಅಡಿಯಲ್ಲಿ ಸ್ಟೇಟ್‌ ಆಫ್‌ ಕೂರ್ಗ್‌ ಎಂದು ಗುರುತಿಸಲಾಗಿದೆ.ಅದರಂತೆ ಸ್ಟೇಟ್‌ ಆಫ್‌ ಕೂರ್ಗ್‌ ಗೆ ಲೋಕಸಭೆ ಮತ್ತು ರಾಜ್ಯಸಭೆಗೆ ತಲಾ ಓರ್ವ ಸದಸ್ಯರನ್ನು ಕಳುಹಿಸಲು ಅವಕಾಶವಿದೆ.ಸಿ ಸ್ಟೇಟ್‌ ಕಾಯ್ದೆ 1952 ರ ಪ್ರಕಾರ ಕೂರ್ಗ್‌ ಎಂಬುದು ಭಾರತೀಯ ಒಕ್ಕೂಟದ ಸಿ ಸ್ಟೇಟ್‌ ಭಾಗಾಗಿದೆ.ಕೂರ್ಗ್‌ ಸ್ವಯಂ ಅವಲಂಬಿತ ಸ್ಟೇಟ್‌ ಆಗಿದ್ದು,1956 ರಲ್ಲಿ ಮೈಸೂರು ರಾಜ್ಯದೊಂದಿಗೆ ವಿಲೀನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಅಲ್ಲದೇ ಸಂವಿಧಾನದ ಆರನೇ ಶೆಡ್ಯೂಲ್‌ ನಲ್ಲಿ ಸ್ಥಳೀಯ ಮತ್ತು ಬುಡಕಟ್ಟು ಸಮೂಹದ ಹಕ್ಕುಗಳನ್ನು ಸಂರಕ್ಷಿಸಲು ಅಟಾನಮಸ್‌ ಡಿಸ್ಟ್ರಿಕ್‌ ಕೌನ್ಸಿಲ್ (ಎಸಿಡಿ) ಸಹ ಸ್ಥಾಪಿಸಲಾಗಿದೆ.ಭಾರತದ ಈಶಾನ್ಯ ಭಾಗದ ಪ್ರದೇಶಗಳಾದ ಅಸ್ಸಾಂ,ಮಿಜೋರಾಂ,ಮೆಘಾಲಯ ಮತ್ತು ತ್ರಿಪುರ ರಾಜ್ಯಗಳಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲಾಗಿದೆ.ಅದೇ ರೀತಿ ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ,ಇತಿಹಾಸ ಮತ್ತು ಸಂಸ್ಕೃತಿ ಹಿನ್ನೆಲೆ ಹೊಂದಿದ್ದಾರೆ.ಅವರ ಹಕ್ಕುಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೊಡವ ಸಮುದಾಯಕ್ಕೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲು ಕೋರಿ ಸಿಎನ್ ಸಿ ಮನವಿ ಸಲ್ಲಿಸಿದೆ.ಆ ಬಗ್ಗೆ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಮಾಡಲು ಆಯೋಗವೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.ಕಾನೂನು ಇಲಾಖೆ ಕಾರ್ಯದರ್ಶಿ,ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ,ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಅರಿಯಲ್ಲಿ ಪ್ರತಿವಾದಿಗಳು ಎಂದು ಗುರುತಿಸಲಾಗಿದೆ.

lokesh

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago