BREAKING NEWS

ಸ್ವಾಯತ್ತ ಕೊಡಗಿಗೆ ಆಯೋಗ ರಚನೆ ವಿಚಾರ : ಏಪ್ರಿಲ್‌ 17 ಕ್ಕೆ ಹೈಕೋರ್ಟ್‌ ನಲ್ಲಿ ವಿಚಾರಣೆ

ಬೆಂಗಳೂರು : ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಕಲ್ಪಿಸುವಂತೆ ಕೊಡವ ಕೌನ್ಸಿಲ್‌ ( ಸಿಎನ್ ಸಿ ) ಸಲ್ಲಿಸಿರುವ ಬೇಡಿಕೆಯ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ( ಪಿಐಎಲ್)‌ ಯ ವಿಚಾರಣೆಯನ್ನು ಹೈಕೋರ್ಟ್‌ ಏಪ್ರಿಲ್‌ 17 ಕ್ಕೆ ನಿಗಧಿ ಪಡಿಸಿದೆ.
ಈ ಬಗ್ಗೆ ರಾಜ್ಯಸಭಾ ಸದಸ್ಯರಾದ ಡಾ.ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ.ಗುರುವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿದ್ದ ಅವರು,ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಕೋರಿ ಮೆಮೊ ಸಲ್ಲಿಸಿದ್ದರು.ಆ ಮೆಮೊ ಸ್ವೀಕರಿಸಿದ ನ್ಯಾಯಪೀಠ ಇದೇ ಏಪ್ರಿಲ್‌ 17 ಕ್ಕೆ ವಿಚಾರಣೆ ನಿಗಧಿಪಡಿಸಿತ್ತು,ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆ ಹೊಂದಿದ್ದಾರೆ.ಇದರಿಂದ ಸಂವಿಧಾನದ ಪರಿಚ್ಛೇದ 242 ಅಡಿಯಲ್ಲಿ ಸ್ಟೇಟ್‌ ಆಫ್‌ ಕೂರ್ಗ್‌ ಎಂದು ಗುರುತಿಸಲಾಗಿದೆ.ಅದರಂತೆ ಸ್ಟೇಟ್‌ ಆಫ್‌ ಕೂರ್ಗ್‌ ಗೆ ಲೋಕಸಭೆ ಮತ್ತು ರಾಜ್ಯಸಭೆಗೆ ತಲಾ ಓರ್ವ ಸದಸ್ಯರನ್ನು ಕಳುಹಿಸಲು ಅವಕಾಶವಿದೆ.ಸಿ ಸ್ಟೇಟ್‌ ಕಾಯ್ದೆ 1952 ರ ಪ್ರಕಾರ ಕೂರ್ಗ್‌ ಎಂಬುದು ಭಾರತೀಯ ಒಕ್ಕೂಟದ ಸಿ ಸ್ಟೇಟ್‌ ಭಾಗಾಗಿದೆ.ಕೂರ್ಗ್‌ ಸ್ವಯಂ ಅವಲಂಬಿತ ಸ್ಟೇಟ್‌ ಆಗಿದ್ದು,1956 ರಲ್ಲಿ ಮೈಸೂರು ರಾಜ್ಯದೊಂದಿಗೆ ವಿಲೀನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಅಲ್ಲದೇ ಸಂವಿಧಾನದ ಆರನೇ ಶೆಡ್ಯೂಲ್‌ ನಲ್ಲಿ ಸ್ಥಳೀಯ ಮತ್ತು ಬುಡಕಟ್ಟು ಸಮೂಹದ ಹಕ್ಕುಗಳನ್ನು ಸಂರಕ್ಷಿಸಲು ಅಟಾನಮಸ್‌ ಡಿಸ್ಟ್ರಿಕ್‌ ಕೌನ್ಸಿಲ್ (ಎಸಿಡಿ) ಸಹ ಸ್ಥಾಪಿಸಲಾಗಿದೆ.ಭಾರತದ ಈಶಾನ್ಯ ಭಾಗದ ಪ್ರದೇಶಗಳಾದ ಅಸ್ಸಾಂ,ಮಿಜೋರಾಂ,ಮೆಘಾಲಯ ಮತ್ತು ತ್ರಿಪುರ ರಾಜ್ಯಗಳಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲಾಗಿದೆ.ಅದೇ ರೀತಿ ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ,ಇತಿಹಾಸ ಮತ್ತು ಸಂಸ್ಕೃತಿ ಹಿನ್ನೆಲೆ ಹೊಂದಿದ್ದಾರೆ.ಅವರ ಹಕ್ಕುಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೊಡವ ಸಮುದಾಯಕ್ಕೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲು ಕೋರಿ ಸಿಎನ್ ಸಿ ಮನವಿ ಸಲ್ಲಿಸಿದೆ.ಆ ಬಗ್ಗೆ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಮಾಡಲು ಆಯೋಗವೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.ಕಾನೂನು ಇಲಾಖೆ ಕಾರ್ಯದರ್ಶಿ,ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ,ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಅರಿಯಲ್ಲಿ ಪ್ರತಿವಾದಿಗಳು ಎಂದು ಗುರುತಿಸಲಾಗಿದೆ.

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

44 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

50 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

54 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago