ಬೆಂಗಳೂರು : ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಕಲ್ಪಿಸುವಂತೆ ಕೊಡವ ಕೌನ್ಸಿಲ್ ( ಸಿಎನ್ ಸಿ ) ಸಲ್ಲಿಸಿರುವ ಬೇಡಿಕೆಯ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ( ಪಿಐಎಲ್) ಯ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 17 ಕ್ಕೆ ನಿಗಧಿ ಪಡಿಸಿದೆ.
ಈ ಬಗ್ಗೆ ರಾಜ್ಯಸಭಾ ಸದಸ್ಯರಾದ ಡಾ.ಸುಬ್ರಮಣಿಯನ್ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ.ಗುರುವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿದ್ದ ಅವರು,ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಕೋರಿ ಮೆಮೊ ಸಲ್ಲಿಸಿದ್ದರು.ಆ ಮೆಮೊ ಸ್ವೀಕರಿಸಿದ ನ್ಯಾಯಪೀಠ ಇದೇ ಏಪ್ರಿಲ್ 17 ಕ್ಕೆ ವಿಚಾರಣೆ ನಿಗಧಿಪಡಿಸಿತ್ತು,ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆ ಹೊಂದಿದ್ದಾರೆ.ಇದರಿಂದ ಸಂವಿಧಾನದ ಪರಿಚ್ಛೇದ 242 ಅಡಿಯಲ್ಲಿ ಸ್ಟೇಟ್ ಆಫ್ ಕೂರ್ಗ್ ಎಂದು ಗುರುತಿಸಲಾಗಿದೆ.ಅದರಂತೆ ಸ್ಟೇಟ್ ಆಫ್ ಕೂರ್ಗ್ ಗೆ ಲೋಕಸಭೆ ಮತ್ತು ರಾಜ್ಯಸಭೆಗೆ ತಲಾ ಓರ್ವ ಸದಸ್ಯರನ್ನು ಕಳುಹಿಸಲು ಅವಕಾಶವಿದೆ.ಸಿ ಸ್ಟೇಟ್ ಕಾಯ್ದೆ 1952 ರ ಪ್ರಕಾರ ಕೂರ್ಗ್ ಎಂಬುದು ಭಾರತೀಯ ಒಕ್ಕೂಟದ ಸಿ ಸ್ಟೇಟ್ ಭಾಗಾಗಿದೆ.ಕೂರ್ಗ್ ಸ್ವಯಂ ಅವಲಂಬಿತ ಸ್ಟೇಟ್ ಆಗಿದ್ದು,1956 ರಲ್ಲಿ ಮೈಸೂರು ರಾಜ್ಯದೊಂದಿಗೆ ವಿಲೀನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಅಲ್ಲದೇ ಸಂವಿಧಾನದ ಆರನೇ ಶೆಡ್ಯೂಲ್ ನಲ್ಲಿ ಸ್ಥಳೀಯ ಮತ್ತು ಬುಡಕಟ್ಟು ಸಮೂಹದ ಹಕ್ಕುಗಳನ್ನು ಸಂರಕ್ಷಿಸಲು ಅಟಾನಮಸ್ ಡಿಸ್ಟ್ರಿಕ್ ಕೌನ್ಸಿಲ್ (ಎಸಿಡಿ) ಸಹ ಸ್ಥಾಪಿಸಲಾಗಿದೆ.ಭಾರತದ ಈಶಾನ್ಯ ಭಾಗದ ಪ್ರದೇಶಗಳಾದ ಅಸ್ಸಾಂ,ಮಿಜೋರಾಂ,ಮೆಘಾಲಯ ಮತ್ತು ತ್ರಿಪುರ ರಾಜ್ಯಗಳಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲಾಗಿದೆ.ಅದೇ ರೀತಿ ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ,ಇತಿಹಾಸ ಮತ್ತು ಸಂಸ್ಕೃತಿ ಹಿನ್ನೆಲೆ ಹೊಂದಿದ್ದಾರೆ.ಅವರ ಹಕ್ಕುಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೊಡವ ಸಮುದಾಯಕ್ಕೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲು ಕೋರಿ ಸಿಎನ್ ಸಿ ಮನವಿ ಸಲ್ಲಿಸಿದೆ.ಆ ಬಗ್ಗೆ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಮಾಡಲು ಆಯೋಗವೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.ಕಾನೂನು ಇಲಾಖೆ ಕಾರ್ಯದರ್ಶಿ,ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ,ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಅರಿಯಲ್ಲಿ ಪ್ರತಿವಾದಿಗಳು ಎಂದು ಗುರುತಿಸಲಾಗಿದೆ.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…