BREAKING NEWS

ಬಿಬಿಎಂಪಿ ಯೋಜನೆಗಳು ಹಾಗೂ ಕಾಮಗಾರಿಗಳ ಅಕ್ರಮಗಳ ಕುರಿತು ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 2019 ರಿಂದ ಈವರೆಗೆ ನಡೆದಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಅಕ್ರಮಗಳ ಕುರಿತು ತನಿಖೆಗೆ ನಾಲ್ವರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ದಳ ( ಎಸ್ ಐಟಿ) ರಚಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಘನತ್ಯಾಜ್ಯ ನಿರ್ವಹಣೆ, ರಸ್ತೆ ಅಭಿವೃದ್ಧಿ ಓಎಫ್‍ಸಿ ಕೇಬಲ್ ಅಳವಡಿಕೆ, ಬೃಹತ್ ನೀರು ಕಾಲುವೆ ಕಾಮಗಾರಿ, ಕೇಂದ್ರ ವಲಯ ನಗರ ಯೋಜನೆಗಳ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿಗಳು, ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ದೂರುಗಳನ್ನು ತನಿಖೆ ನಡೆಸಲು ಸೂಚಿಸಲಾಗಿದೆ.

ಈಗಾಗಲೇ ತನಿಖೆಗೆ ಒಳಪಡಿಸಿರುವ ಕಾಮಗಾರಿಗಳನ್ನು ಹೊರತುಪಡಿಸಿ ಉಳಿದವುಗಳನ್ನು ಸ್ಥಳ ಮತ್ತು ದಾಖಲಾತಿಗಳ ಪರಾಮರ್ಶೆಯೊಂದಿಗೆ ಆರೋಪಿತರ ಸ್ಪಷ್ಟ ಗುರುತಿಸುವಿಕೆಯ ಸಹಿತ ಪರಿಪೂರ್ಣ ವರದಿಯನ್ನು ಸೂಕ್ತ ಅಭಿಪ್ರಾಯ ಶಿಫಾರಸ್ಸಿನೊಂದಿಗೆ 30 ದಿನಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಲು ಆದೇಶಿಸಲಾಗಿದೆ.

ತನಿಖೆಗೆ ನಾಲ್ವರು ಐಎಎಸ್ ಅಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಘನತ್ಯಾಜ್ಯ ನಿರ್ವಹಣೆ ಕಾಮಗಾರಿಗಳ ಆರೋಪಗಳ ಕುರಿತು ಹಿರಿಯ ಐಎಎಸ್ ಅಕಾರಿ ಉಜ್ವಲ್ ಕುಮಾರ್ ಘೋಷ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರರಾದ ದೊಡ್ಡಿಹಾಳ್, ಬಸವರಾಜ ಕೋಟಿ, ಕೆಪಿಟಿಸಿಎಲ್‍ನ ನಿವೃತ್ತ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪ್ರಭಾಕರ್ ಅನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೂ ಒಎಫ್‍ಸಿ ಕೇಬಲ್ ಅಳವಡಿಕೆಗೆ ಅನುಮತಿ ನೀಡುವ ಬಗ್ಗೆ ಐಎಎಸ್ ಅಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದು, ಲೋಕೋಪಯೋಗಿ ನಿವೃತ್ತ ಪ್ರಧಾನ ಅಭಿಯಂತರ ಪ್ರಭಾಕರ್ ಡಿ.ಹಮ್ಮಿಗೆ, ನಿವೃತ್ತ ಮುಖ್ಯ ಅಭಿಯಂತರ ಕೆ.ಮೋಹನ್, ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಬಸವರಾಜ್ ಶಂಸಿ ಮಠ್, ಎನ್.ಎಸ್.ಮೋಹನ್ ಸದಸ್ಯರಾಗಿದ್ದಾರೆ.

ಬೃಹತ್ ನೀರುಗಾಲುವೆ ಕಾಮಗಾರಿಗಳು ಹಾಗೂ ಕೇಂದ್ರ, ವಲಯ, ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪತ್ರ ನೀಡಿರುವ ಕುರಿತು ಐಎಎಸ್ ಅಕಾರಿ ಪಿ.ಸಿ.ಜಾಫರ್ ಅಧ್ಯಕ್ಷತೆಯಲ್ಲಿ ಮೂವರ ಸಮಿತಿ ರಚನೆಯಾಗಿದ್ದು, ಇಐಸಿಆರ್ನ ನಿವೃತ್ತ ಕಾರ್ಯದರ್ಶಿ ಎಚ್.ಬಿ.ಸಿದ್ದಗಂಗಪ್ಪ, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಎಚ್.ಆರ್.ರಾಮಕೃಷ್ಣ, ನಿವೃತ್ತ ಕಾರ್ಯಪಾಲಕ ಅಭಿಯಂತರ ಮಲ್ಲೇಶ್ ಸಮಿತಿಯಲ್ಲಿದ್ದಾರೆ.

ಕೆರೆ ಅಭಿವೃದ್ಧಿ ಕಾಮಗಾರಿಗಳು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ವಾರ್ಡ್ ಮಟ್ಟದ ಕಾಮಗಾರಿಗಳ ತನಿಖಾ ಸಮಿತಿಗೆ ಐಎಎಸ್ ಅಕಾರಿ ಡಾ.ವಿಶಾಲ್ ಅವರು ಅಧ್ಯಕ್ಷರಾಗಿದ್ದು, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಬೀಸೇಗೌಡ, ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಎಚ್.ಪಿ.ಪ್ರಕಾಶ್, ಶ್ರೀಕಾಂತ್, ಎಚ್.ಕುಮಾರ್, ಜಿ.ಎಸ್.ಗೋಪಿನಾಥ್ ಸದಸ್ಯರಾಗಿದ್ದಾರೆ.

ತನಿಖಾ ವ್ಯಾಪ್ತಿಗೆ ಕೆಲವು ನಿಬಂಧನೆಗಳನ್ನು ವಿಸಲಾಗಿದೆ. ಕೈಗೆತ್ತಿಕೊಳ್ಳಲಾದ ಕಾಮಗಾರಿಗಳಿಗೆ ಅಗತ್ಯ ಶಾಸನಬದ್ಧ ಅನುಮತಿಗಳನ್ನು ಪಡೆಯಲಾಗಿದೆಯೇ, ಕೆಟಿಪಿಪಿ ಕಾಯ್ದೆ ಪಾಲನೆ ಮತ್ತು ಸರ್ಕಾರದ ಅನುಮತಿ ಇದೆಯೇ, ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಾವಳಿಗಳನ್ನು ತಿರುಚುವುದು ಅಥವಾ ಸಡಿಲಗೊಳಿಸುವ ಮೂಲಕ ದುವ್ರ್ಯವಹಾರ ನಡೆಸಿ ಅನರ್ಹರಿಗೆ ಟೆಂಡರ್ ನೀಡಲಾಗಿದೆಯೇ, ನಿರ್ದಿಷ್ಟ ಗುತ್ತಿಗೆದಾರರ ಹೆಸರಿನಲ್ಲಿ ಕಾರ್ಯಾದೇಶ ನೀಡಿ ಬೇರೆಯವರಿಗೆ ಬಿಲ್ ಪಾವತಿ ಮಾಡಿರುವುದು ಸೇರಿದಂತೆ 16 ಅಂಶಗಳನ್ನು ತನಿಖೆ ನಡೆಸಲು ಸೂಚಿಸಲಾಗಿದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago