BREAKING NEWS

ಆಂಧ್ರ ಮಾಜಿ ಸಿಎಂ ಅರೆಸ್ಟ್‌

ಹೈದರಾಬಾದ್‌ : ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ.

ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ ನೇತೃತ್ವದ ಪೊಲೀಸರ ಆರ್‌ಕೆ ಫಂಕ್ಷನ್ ಹಾಲ್‌ನಲ್ಲಿರುವ ನಾಯ್ಡು ಅವರ ನಿವಾಸಕ್ಕೆ ಮುಂಜಾನೆ 3 ಗಂಟೆಗೆ ಆಗಮಿಸಿದ್ದಾರೆ.

ಈ ಸಮಯದಲ್ಲಿ ಚಂದ್ರಬಾಬು ನಾಯ್ದು ವಿಶ್ರಾಂತಿ ಪಡೆಯುತ್ತಿದ್ದರು. ಪೊಲೀಸರು ವಶಕ್ಕೆ ಪಡೆಯಲು ಬಂದ ವಿಚಾರ ತಿಳಿದು ಭಾರೀ ಸಂಖ್ಯೆಯಲ್ಲಿ ನಾಯ್ಡು ಮನೆ ಬಳಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳ ಪ್ರತಿಭಟನೆಯಿಂದ ಪೊಲೀಸರಿಗೆ ನಾಯ್ದು ಅವರನ್ನು ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ.

ನಾಯ್ಡು ಅವರ ರಕ್ಷಣೆಗೆ ನಿಯೋಜನೆಗೊಂಡಿದ್ದ ಎಸ್‌ಪಿಜಿ ಪಡೆಗಳು ಸಹ ಪೊಲೀಸರಿಗೆ ಅನುಮತಿ ನೀಡಿರಲಿಲ್ಲ. ಕೊನೆಗೆ 6 ಗಂಟೆಗೆ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದರು.

ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಅವರು ಎ1 ಆರೋಪಿ ಎಂದು ಡಿಐಜಿ ರಘುರಾಮಿ ರೆಡ್ಡಿ ತಿಳಿಸಿದರು.

ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409 ರ ಅಡಿಯಲ್ಲಿ ಬಂಧಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago