ಗದಗ: ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ತಿಳಿಸಿದ್ದಾರೆ.
ಶನಿವಾರ ಕುಂದ್ರಳ್ಳಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಮಾತನಾಡಿದ ಮಾಜಿ ಶಾಸಕ ರಾಮಣ್ಣ ಲಮಾಣಿ, ʼʼನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆʼʼ ಎಂದು ಹೇಳಿದ್ದಾರೆ.
ʼʼಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತದವರೆಗೂ ಎಲ್ಲಾ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚಗಳನ್ನು ಮಾಡಿದ್ದೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ. ಆದರೆ ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲʼʼ ಎಂದು ಆರೋಪಿಸಿದ್ದಾರೆ.
ಇತ್ತೀಚೆಗಷ್ಟೇ ರಾಮಣ್ಣ ಲಮಾಣಿ ಮತ್ತು ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…