ಗದಗ: ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ತಿಳಿಸಿದ್ದಾರೆ.
ಶನಿವಾರ ಕುಂದ್ರಳ್ಳಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಮಾತನಾಡಿದ ಮಾಜಿ ಶಾಸಕ ರಾಮಣ್ಣ ಲಮಾಣಿ, ʼʼನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆʼʼ ಎಂದು ಹೇಳಿದ್ದಾರೆ.
ʼʼಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತದವರೆಗೂ ಎಲ್ಲಾ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚಗಳನ್ನು ಮಾಡಿದ್ದೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ. ಆದರೆ ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲʼʼ ಎಂದು ಆರೋಪಿಸಿದ್ದಾರೆ.
ಇತ್ತೀಚೆಗಷ್ಟೇ ರಾಮಣ್ಣ ಲಮಾಣಿ ಮತ್ತು ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…