BREAKING NEWS

ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು : ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.

‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

lokesh

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

7 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

7 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

8 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

8 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

9 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

10 hours ago