Mysore
14
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಶುಭಕೋರಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್‌ ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ. 

https://twitter.com/BSBommai/status/1659218821344030723?t=eOrV1eBq98i5Ie9XVIEX0Q&s=19

ಟ್ವೀಟ್‌ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್‌ರವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಆಶಿಸಿದ್ದಾರೆ.

https://twitter.com/BSBommai/status/1659219453962502144?t=Nt9euNfNO0AHYUXQlGcceg&s=19

ರ್ನಾಟಕ ಸಿಎಂ ಫೈಟ್‌ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಅವರಿಂದಲೇ ಘೋಷಣೆ ಮಾಡಲಾಯಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!