ನವದೆಹಲಿ: ಕ್ಯಾನ್ಸರ್ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಸಲೀಂ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…