ನವದೆಹಲಿ: ಕ್ಯಾನ್ಸರ್ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಸಲೀಂ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…