ನವದೆಹಲಿ: ಕ್ಯಾನ್ಸರ್ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಸಲೀಂ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…