ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಅಂಜನ ಮೂರ್ತಿ ಅವರು 10ನೇ ಏಪ್ರಿಲ್ 1941ರಲ್ಲಿ ಜನಿಸಿದರು. ಬಿಎ, ಬಿ.ಎಲ್ ಪದವೀಧರರು. 1989-1994 ಮತ್ತು 1999 ರಿಂದ 23 ಫೆಬ್ರವರಿ 2004 ರಿಂದ 2007 ಠಂಪಿಂಗ್ ಮೂರು ಬಾರಿ ಆಯ್ಕೆ ಸಮೀಪದ ಪ್ರತಿಸ್ಪರ್ಧಿಗಿಂತ 37000 ಮತಗಳ ಬಹುಮತ ಸಾಧಿಸಿದ್ದರು.
ಮಾರ್ಚ್ 1993ರಲ್ಲಿ ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2005-06 ರಿಂದ ವಸತಿ ಸಚಿವರಾಗಿದ್ದರು. ನವದೆಹಲಿಯಲ್ಲಿ ನಡೆದ 89 ಅಂತರ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅಖಿಲ ಭಾರತ ಪೀಠಾಧಿಪತಿಗಳಾಗಿ ಹಾಜರಾಗಿದ್ದರು. 1994ರಲ್ಲಿ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಪೀಠಾಧಿಪತಿಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಶಿಯೋಮಣಿ ಸಂಸ್ಥೆ, ನವದೆಹಲಿಯಿಂದ ಶಿರೋಮಣಿ ವಿಕಾಸ್ ಪ್ರಶಸ್ತಿ ನೀಡಿ ಅಂಜನ ಮೂರ್ತಿಯವರನ್ನು ಗೌರವಿಸಿತ್ತು. ಮಾನವ ಸೇವಾ ಪುರಸ್ಕಾರ, 1993ರಲ್ಲಿ ವಿಶೇಷ ಸ್ಕ್ರಾಲ್ ಆಫ್ ಆನರ್ ಸೇರಿದಂತೆ ಕೆಲವು ಗೌರವಗಳು ಸಿಕ್ಕಿವೆ.
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…