BREAKING NEWS

ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ ನಿಧನ

ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅಂಜನ ಮೂರ್ತಿ ಅವರು 10ನೇ ಏಪ್ರಿಲ್ 1941ರಲ್ಲಿ ಜನಿಸಿದರು. ಬಿಎ, ಬಿ.ಎಲ್ ಪದವೀಧರರು. 1989-1994 ಮತ್ತು 1999 ರಿಂದ 23 ಫೆಬ್ರವರಿ 2004 ರಿಂದ 2007 ಠಂಪಿಂಗ್ ಮೂರು ಬಾರಿ ಆಯ್ಕೆ ಸಮೀಪದ ಪ್ರತಿಸ್ಪರ್ಧಿಗಿಂತ 37000 ಮತಗಳ ಬಹುಮತ ಸಾಧಿಸಿದ್ದರು.

  • 18.03.1993, 1994 ರಲ್ಲಿ Dy, ಸ್ಪೀಕರ್ ಆಗಿದ್ದರು.
  • 2003 ರಿಂದ 2004 ರವರೆಗೆ ಕರ್ನಾಟಕದ SC/ST ಆಯೋಗದ ಅಧ್ಯಕ್ಷರು.
  • 16.12.2005 ರಿಂದ 06 ರವರೆಗೆ ಪ್ರಧಾನ ಕಾರ್ಯದರ್ಶಿ- ತಾಲೂಕು ಯುವ ಕಾಂಗ್ರೆಸ್
  • 1972-76ಸದಸ್ಯರು-ತಾಲೂಕು ಅಭಿವೃದ್ಧಿ ಮಂಡಳಿ [ಟಿಡಿಬಿ), ನೆಲಮಂಗಲ
  • 1978-83 ಲ್ಯಾಂಡ್ ಟ್ರಿಬ್ಯೂನಲ್ ಸದಸ್ಯ
  • 1980-82 ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
  • 1980-85 ಅಧ್ಯಕ್ಷರು SC/ST ಸಮಿತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
  • 1983-88 ಅಧ್ಯಕ್ಷರು, ವಕೀಲರ ವಕೀಲರ ಸಂಘ, ನೆಲಮಂಗಲ
  • 1985-88 ನೆಲಮಂಗಲದ  ಅರುಂಧತಿ ವಿದುವಾ ಸಂಸ್ಥೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಕೀಯ ಚಟುವಟಿಕೆಗಳು

ಮಾರ್ಚ್ 1993ರಲ್ಲಿ ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2005-06 ರಿಂದ ವಸತಿ ಸಚಿವರಾಗಿದ್ದರು. ನವದೆಹಲಿಯಲ್ಲಿ ನಡೆದ 89 ಅಂತರ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅಖಿಲ ಭಾರತ ಪೀಠಾಧಿಪತಿಗಳಾಗಿ ಹಾಜರಾಗಿದ್ದರು. 1994ರಲ್ಲಿ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಪೀಠಾಧಿಪತಿಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಶಿಯೋಮಣಿ ಸಂಸ್ಥೆ, ನವದೆಹಲಿಯಿಂದ ಶಿರೋಮಣಿ ವಿಕಾಸ್ ಪ್ರಶಸ್ತಿ ನೀಡಿ ಅಂಜನ ಮೂರ್ತಿಯವರನ್ನು ಗೌರವಿಸಿತ್ತು. ಮಾನವ ಸೇವಾ ಪುರಸ್ಕಾರ, 1993ರಲ್ಲಿ ವಿಶೇಷ ಸ್ಕ್ರಾಲ್ ಆಫ್ ಆನರ್ ಸೇರಿದಂತೆ ಕೆಲವು ಗೌರವಗಳು ಸಿಕ್ಕಿವೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago