BREAKING NEWS

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ, ಮಾಜಿ ಸಿಎಂ ದೇವರಾಜ ಅರಸರು ಪ್ರಜಾತಂತ್ರದ ರೂವಾರಿಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಭಾರತೀಯರನ್ನು 21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ವಿಧಾನಸೌಧದ ಕನಸು ಕಾಣಲೂ ಅಶಕ್ತರಾಗಿದ್ದ ಜಾತಿಗಳು ಗೆದ್ದು ವಿಧಾನಸಭೆ ಪ್ರವೇಶಿಸುವಂತೆ ಮಾಡಿದ ದೇವರಾಜು ಅರಸರು ಪ್ರಜಾತಂತ್ರದ ರೂವಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೂರದೃಷ್ಟಿಯ ನಾಯಕ ರಾಜೀವ್ ಗಾಂಧಿ ಮತದಾನದ ವಯಸ್ಸನ್ನು 18 ವರ್ಷಕ್ಕೆ ಇಳಿಸಿದರು. ಆ ಮೂಲಕ ಯುವ ಸಮೂಹ ದೇಶದ ಭವಿಷ್ಯ ರೂಪಿಸುವಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಮಹಾನ್ ಜವಾಬ್ದಾರಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು.

ದೇಶದ ಎಲ್ಲಾ ರಂಗಗಳಲ್ಲೂ ಯುವ ಸಮೂಹ ಮತ್ತು ಎಲ್ಲಾ ಜಾತಿ, ಜನ ವರ್ಗಗಳ ಪ್ರತಿನಿಧಿಗಳು ಪಾಲ್ಗೊಳ್ಳುವಿಕೆಯ ಮಹಾದ್ವಾರವನ್ನು ತೆರೆದವರು ರಾಜೀವ್ ಗಾಂಧಿ. ಇದಕ್ಕಾಗಿ ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿದರು. ಸಂವಿಧಾನಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತಂದರು.

ಮಹಿಳೆಯರ ರಾಜಕೀಯ ಪ್ರಾತಿನಿಧ್ಯದ ಅವಕಾಶವನ್ನು ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದವರು ರಾಜೀವ್ ಗಾಂಧಿ. ಇಂದು ರಾಜಕೀಯ ಕ್ಷೇತ್ರದಲ್ಲಿ ಇರುವ ಮಹಿಳೆಯರೆಲ್ಲರೂ ರಾಜೀವ್ ಗಾಂಧಿ ಅವರನ್ನು ಸ್ಮರಿಸಬೇಕು. ಶೇ50 ಮಹಿಳಾ ಮೀಸಲಾತಿ ಸಾಧ್ಯ ಆಗಿದ್ದು ರಾಜೀವ್ ಗಾಂಧಿ ಅವರಿಂದ ಎನ್ನುವುದನ್ನು ದೇಶದ ಪ್ರತಿಯೊಬ್ಬ ಮಹಿಳೆಯರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ ನೆಟ್ ವ್ಯವಸ್ಥೆಯಲ್ಲಿ ಭಾರತದಲ್ಲಿ ಕ್ರಾಂತಿ ಮಾಡಿದವರು ರಾಜೀವ್ ಗಾಂಧಿ. ಅವರು ಭವ್ಯ ಭಾರತ ನಿರ್ಮಾಣದ ಮತ್ತು ಸಾಮಾಜಿಕ ನ್ಯಾಯದ ಸಮಾಜವನ್ನು ರೂಪಿಸುವ ಮಹಾನ್ ಕನಸು ಮತ್ತು ಕಾರ್ಯಕ್ರಮಗಳನ್ನು ಇಟ್ಟುಕೊಂಡಿದ್ದರು. ಅವೆಲ್ಲಾ ಜಾರಿ ಮಾಡುತ್ತಿದ್ದ ಹೊತ್ತಲ್ಲೇ ಹುತಾತ್ಮರಾಗಿ ಈ ನೆಲದ ಮಣ್ಣಿನಲ್ಲಿ ತ್ಯಾಗಮಯಿಯಾಗಿ ದಾಖಲಾದರು ಎಂದು ವಿವರಿಸಿದರು.

ದೇಶಕ್ಕಾಗಿ, ದೇಶದ ಸಮಗ್ರತೆಗಾಗಿ ಹೋರಾಟ ಮಾಡಿದ, ತ್ಯಾಗ ಮಾಡಿದ, ಹುತಾತ್ಮರಾದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಈ ಯಾವ ಚರಿತ್ರೆ ಮತ್ತು ಇತಿಹಾಸ ಬಿಜೆಪಿಗೂ ಇಲ್ಲ. ಸಂಘ ಪರಿವಾರಕ್ಕೂ ಇಲ್ಲ. ಕೇವಲ ಭರ್ಜರಿ ಭಾಷಣ ಮಾಡುವುದರಲ್ಲಿ ಮಾತ್ರ ಬಿಜೆಪಿ ಪರಿವಾರದವರು ನಿಸ್ಸೀಮರು. ದೇಶ ನಿರ್ಮಾಣ ಕ್ರಿಯೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪಾತ್ರ ಏನೇನೂ ಇಲ್ಲ. ಕೇವಲ ಭಾಷಣಗಳಿಂದ ದೇಶ ನಿರ್ಮಾಣ ಸಾಧ್ಯವಿಲ್ಲ ಎಂದರು.

ದೇವರಾಜ ಅರಸು ಅವರಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಛಲ ಇತ್ತು. ಹೀಗಾಗಿ ಮಲ ಹೊರುವ ಪದ್ಧತಿ ನಿಲ್ಲಿಸಿದರು. ಜೀತ ವ್ಯವಸ್ಥೆಗೆ ಮುಕ್ತಿ ಹಾಡಿದರು. ಹಿಂದುಳಿದ ಸಮುದಾಯಗಳ ಮೀಸಲಾತಿಗಾಗಿ ಹಾವನೂರು ಆಯೋಗ ರಚಿಸಿದರು. ಉಳುವವನೇ ಭೂ ಒಡೆಯ ಕಾನೂನು ಜಾರಿ ಮಾಡಿದರು.

ಯಾರು ವಿಧಾನಸೌಧದ ಕನಸು ಕಾಣಲೂ ಸಾಧ್ಯ ಇರಲಿಲ್ಲವೂ ಅಂತಹ ಜಾತಿಗಳ ಪ್ರತಿನಿಧಿಗಳು ವಿಧಾನಸೌಧಕ್ಕೆ ಆರಿಸಿ ಬಂದು ಮಂತ್ರಿಗಳಾಗುವ ಹಾಗೆ ಕ್ರಾಂತಿ ಮಾಡಿದವರು ಅರಸು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಬೋಸ್ ರಾಜ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ , ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

55 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago