BREAKING NEWS

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ, ಮಾಜಿ ಸಿಎಂ ದೇವರಾಜ ಅರಸರು ಪ್ರಜಾತಂತ್ರದ ರೂವಾರಿಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಭಾರತೀಯರನ್ನು 21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ವಿಧಾನಸೌಧದ ಕನಸು ಕಾಣಲೂ ಅಶಕ್ತರಾಗಿದ್ದ ಜಾತಿಗಳು ಗೆದ್ದು ವಿಧಾನಸಭೆ ಪ್ರವೇಶಿಸುವಂತೆ ಮಾಡಿದ ದೇವರಾಜು ಅರಸರು ಪ್ರಜಾತಂತ್ರದ ರೂವಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೂರದೃಷ್ಟಿಯ ನಾಯಕ ರಾಜೀವ್ ಗಾಂಧಿ ಮತದಾನದ ವಯಸ್ಸನ್ನು 18 ವರ್ಷಕ್ಕೆ ಇಳಿಸಿದರು. ಆ ಮೂಲಕ ಯುವ ಸಮೂಹ ದೇಶದ ಭವಿಷ್ಯ ರೂಪಿಸುವಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಮಹಾನ್ ಜವಾಬ್ದಾರಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು.

ದೇಶದ ಎಲ್ಲಾ ರಂಗಗಳಲ್ಲೂ ಯುವ ಸಮೂಹ ಮತ್ತು ಎಲ್ಲಾ ಜಾತಿ, ಜನ ವರ್ಗಗಳ ಪ್ರತಿನಿಧಿಗಳು ಪಾಲ್ಗೊಳ್ಳುವಿಕೆಯ ಮಹಾದ್ವಾರವನ್ನು ತೆರೆದವರು ರಾಜೀವ್ ಗಾಂಧಿ. ಇದಕ್ಕಾಗಿ ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿದರು. ಸಂವಿಧಾನಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತಂದರು.

ಮಹಿಳೆಯರ ರಾಜಕೀಯ ಪ್ರಾತಿನಿಧ್ಯದ ಅವಕಾಶವನ್ನು ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದವರು ರಾಜೀವ್ ಗಾಂಧಿ. ಇಂದು ರಾಜಕೀಯ ಕ್ಷೇತ್ರದಲ್ಲಿ ಇರುವ ಮಹಿಳೆಯರೆಲ್ಲರೂ ರಾಜೀವ್ ಗಾಂಧಿ ಅವರನ್ನು ಸ್ಮರಿಸಬೇಕು. ಶೇ50 ಮಹಿಳಾ ಮೀಸಲಾತಿ ಸಾಧ್ಯ ಆಗಿದ್ದು ರಾಜೀವ್ ಗಾಂಧಿ ಅವರಿಂದ ಎನ್ನುವುದನ್ನು ದೇಶದ ಪ್ರತಿಯೊಬ್ಬ ಮಹಿಳೆಯರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ ನೆಟ್ ವ್ಯವಸ್ಥೆಯಲ್ಲಿ ಭಾರತದಲ್ಲಿ ಕ್ರಾಂತಿ ಮಾಡಿದವರು ರಾಜೀವ್ ಗಾಂಧಿ. ಅವರು ಭವ್ಯ ಭಾರತ ನಿರ್ಮಾಣದ ಮತ್ತು ಸಾಮಾಜಿಕ ನ್ಯಾಯದ ಸಮಾಜವನ್ನು ರೂಪಿಸುವ ಮಹಾನ್ ಕನಸು ಮತ್ತು ಕಾರ್ಯಕ್ರಮಗಳನ್ನು ಇಟ್ಟುಕೊಂಡಿದ್ದರು. ಅವೆಲ್ಲಾ ಜಾರಿ ಮಾಡುತ್ತಿದ್ದ ಹೊತ್ತಲ್ಲೇ ಹುತಾತ್ಮರಾಗಿ ಈ ನೆಲದ ಮಣ್ಣಿನಲ್ಲಿ ತ್ಯಾಗಮಯಿಯಾಗಿ ದಾಖಲಾದರು ಎಂದು ವಿವರಿಸಿದರು.

ದೇಶಕ್ಕಾಗಿ, ದೇಶದ ಸಮಗ್ರತೆಗಾಗಿ ಹೋರಾಟ ಮಾಡಿದ, ತ್ಯಾಗ ಮಾಡಿದ, ಹುತಾತ್ಮರಾದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಈ ಯಾವ ಚರಿತ್ರೆ ಮತ್ತು ಇತಿಹಾಸ ಬಿಜೆಪಿಗೂ ಇಲ್ಲ. ಸಂಘ ಪರಿವಾರಕ್ಕೂ ಇಲ್ಲ. ಕೇವಲ ಭರ್ಜರಿ ಭಾಷಣ ಮಾಡುವುದರಲ್ಲಿ ಮಾತ್ರ ಬಿಜೆಪಿ ಪರಿವಾರದವರು ನಿಸ್ಸೀಮರು. ದೇಶ ನಿರ್ಮಾಣ ಕ್ರಿಯೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪಾತ್ರ ಏನೇನೂ ಇಲ್ಲ. ಕೇವಲ ಭಾಷಣಗಳಿಂದ ದೇಶ ನಿರ್ಮಾಣ ಸಾಧ್ಯವಿಲ್ಲ ಎಂದರು.

ದೇವರಾಜ ಅರಸು ಅವರಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಛಲ ಇತ್ತು. ಹೀಗಾಗಿ ಮಲ ಹೊರುವ ಪದ್ಧತಿ ನಿಲ್ಲಿಸಿದರು. ಜೀತ ವ್ಯವಸ್ಥೆಗೆ ಮುಕ್ತಿ ಹಾಡಿದರು. ಹಿಂದುಳಿದ ಸಮುದಾಯಗಳ ಮೀಸಲಾತಿಗಾಗಿ ಹಾವನೂರು ಆಯೋಗ ರಚಿಸಿದರು. ಉಳುವವನೇ ಭೂ ಒಡೆಯ ಕಾನೂನು ಜಾರಿ ಮಾಡಿದರು.

ಯಾರು ವಿಧಾನಸೌಧದ ಕನಸು ಕಾಣಲೂ ಸಾಧ್ಯ ಇರಲಿಲ್ಲವೂ ಅಂತಹ ಜಾತಿಗಳ ಪ್ರತಿನಿಧಿಗಳು ವಿಧಾನಸೌಧಕ್ಕೆ ಆರಿಸಿ ಬಂದು ಮಂತ್ರಿಗಳಾಗುವ ಹಾಗೆ ಕ್ರಾಂತಿ ಮಾಡಿದವರು ಅರಸು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಬೋಸ್ ರಾಜ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ , ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

9 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

10 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

15 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago