ನವದೆಹಲಿ: ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ಚರಂಜಿತ್ ಸಿಂಗ್ ಅತ್ವಾಲ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಶುಕ್ರವಾರ ಸೇರ್ಪಡೆಗೊಂಡರು.
ಚರಂಜಿತ್ ಸಿಂಗ್ ಅತ್ವಾಲ್ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿಕೊಂಡರು.
2004 ರಿಂದ 2009 ರವರೆಗೆ 14 ನೇ ಲೋಕಸಭೆಯ ಉಪ ಸ್ಪೀಕರ್ ಆಗಿದ್ದ ಚರಂಜಿತ್ ಸಿಂಗ್ ಅತ್ವಾಲ್ ಅವರು ಈ ಹಿಂದೆ ಪಂಜಾಬ್ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು.
ಅತ್ವಾಲ್ ಅವರು 15 ಮಾರ್ಚ್ 1937 ರಂದು ಜನಿಸಿದರು.
14 ನೇ ಲೋಕಸಭೆಯಲ್ಲಿ ಪಂಜಾಬ್ನ ಫಿಲ್ಲೌರ್ ಕ್ಷೇತ್ರವನ್ನು ಪ್ರತಿನಿಧಿಸಿದರು ಮತ್ತು ಶಿರೋಮಣಿ ಅಕಾಲಿದಳ ಸದಸ್ಯರಾಗಿದ್ದರು. ಪಂಜಾಬ್ ವಿಧಾನಸಭೆಯ ಎರಡು ಬಾರಿ ಸ್ಪೀಕರ್ ಕೂಡ ಆಗಿದ್ದರು.
ಚರಂಜಿತ್ ಅವರ ಪುತ್ರ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಅವರು ಪಂಜಾಬ್ನ ಹಲವಾರು ಇತರರೊಂದಿಗೆ ಭಾನುವಾರ ನವದೆಹಲಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದ್ದರು ಎಂಬುದು ಗಮನಾರ್ಹ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…