BREAKING NEWS

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಮ್ಯಾನ್‌ಹಾಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ  76 ವರ್ಷ ವಯಸ್ಸಿನ ಟ್ರಂಪ್‌ ಶರಣಾದರು. ಬಳಿಕ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ವಿಚಾರಣೆಗೆ ಕರೆದುಕೊಂಡು ಹೋಗಲಾಯಿತು ಎಂದು ಬಿಬಿಸಿ ವರದಿ ಮಾಡಿದೆ.

ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ, ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ.

ನಮ್ಮ ನಡುವಿನ ಅನೈತಿಕ ಸಂಬಂಧ ಬಹಿರಂಗಪಡಿಸಬಾರದು’ ಎಂದು ನೀಲಿಚಿತ್ರ ತಾರೆಯೊಬ್ಬರಿಗೆ ಹಣ ಸಂದಾಯ ಮಾಡಿದ್ದ ಕುರಿತಂತೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

 

‘ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್‌ ಅವರು, ಕ್ರಿಮಿನಲ್‌ ಆರೋಪ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನಾನು ನಿರ್ದೋಷಿ’ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜುವಾನ್ ಮರ್ಚನ್ ಅವರಿಗೆ ಮನವಿ ಸಲ್ಲಿಸಿದರು.

ಟ್ರಂಪ್‌ 2024ರ ಅಧ್ಯಕ್ಷೀಯ ಚುನಾವಣೆ ಸಿದ್ಧತೆಯಲ್ಲಿದ್ದು, ಎರಡನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಹೀಗಾಗಿ, ಈ ಬೆಳವಣಿಗೆ ಅಮೆರಿಕದಲ್ಲಿ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.

ವಿಚಾರಣೆಗೆ ಮ್ಯಾನ್ ಹಾಟನ್‌ಗೆ ಬಂದ ಟ್ರಂಪ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ, ‘ಇದು ಅವಾಸ್ತವಿಕ. ಬಹುಶಃ ಅವರು ನನ್ನನ್ನು ಬಂಧಿಸಬಹುದು. ಅಮೆರಿಕದಲ್ಲಿ ಇಂತಹದ್ದು ಘಟಿಸುತ್ತಿದೆ ಎನ್ನುವುದನ್ನು ನಂಬಲು ಆಗುತ್ತಿಲ್ಲ‘ ಎಂದು ‘ಟ್ರೂತ್‌’ ಜಾಲತಾಣದ ಖಾತೆಯಲ್ಲಿ ಟ್ರಂಪ್‌ ಪೋಸ್ಟ್‌ ಹಾಕಿದ್ದರು.

ಟ್ರಂಪ್‌ ಅವರ ವಿಚಾರಣೆಯು ಮಾಧ್ಯಮಗಳ ಗಮನಸೆಳೆದಿದೆ. ಕೋರ್ಟ್‌ನ ಬಳಿ ಮಾಧ್ಯಮಗಳ ಪ್ರತಿನಿಧಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದರು. ಅಲ್ಲದೆ, ಟ್ರಂಪ್‌ ವಿರೋಧಿಗಳು ಪ್ರತಿಭಟನ ರ‍್ಯಾಲಿಯನ್ನು ಕೈಗೊಂಡಿದ್ದು, ಬೆಂಬಲಿಗರು ಸೇರಿದ್ದರು. ಕೋರ್ಟ್‌ ಆವರಣಕ್ಕೆ ತೆರಳುವ ಮೊದಲು ಬೆಂಬಲಿಗರತ್ತ ಟ್ರಂಪ್‌ ಕೈಬೀಸಿದರು.

ವಶಕ್ಕೆ ಪಡೆದ ಹಿಂದೆಯೇ ಪೊಲೀಸರು, ಕೋರ್ಟ್‌ ಹಾಲ್‌ಗೆ ಕರೆದೊಯ್ಯುವ ಮೊದಲು ಟ್ರಂಪ್‌ ಅವರ ಬೆರಳಚ್ಚುಗಳ ಮಾದರಿ ಪಡೆದರು. ಹೆಸರು, ವಯಸ್ಸು, ಎತ್ತರ, ತೂಕ ಒಳಗೊಂಡಂತೆ ವ್ಯಕ್ತಿಗತ ಮಾಹಿತಿ ಪಡೆದರು. ಅವರ ವಿರುದ್ಧ ಯಾವುದಾದರೂ ವಾರಂಟ್ ಬಾಕಿ ಇದೆಯೇ ಎಂದು ಪರಿಶೀಲಿಸಿದರು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago