ಮಥುರಾ (ಉತ್ತರ ಪ್ರದೇಶ) : ರಾಮನವಮಿ ಶೋಭಾಯಾತ್ರೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮಾಲ್ ಮಸೀದಿಯ ಸಮೀಪ ಶಾಂತಿಭಂಗ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತರನ್ನು ಕಾವ್ಯ, ಹನಿ, ರಾಜೇಶ್ ಹಾಗೂ ದೀಪಕ್ ಎಂದು ಗುರುತಿಸಲಾಗಿದೆ.
ಗುರುವಾರ ನಡೆದ ರಾಮನವಮಿ ಮೆರವಣಿಗೆ ವೇಳೆ ಮಸೀದಿಯ ಸಮೀಪ ಇರುವ ಕಟ್ಟಡವೊಂದರಲ್ಲಿ ಕೇಸರಿ ಧ್ವಜ ಹಾರಿಸಿದ ಆರೋಪ ಇವರ ಮೇಲೆ ಇದೆ.ಘಿಯಾಮಂಡಿ ಪ್ರದೇಶದಲ್ಲಿರುವ ರಾಮ ಮಂದಿರದ ರಾಮ ಜನ್ಮ ಮಹೋತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆಯು ಚೌಕ್ ಬಜಾರ್ ಬಳಿ ತಲುಪಿದಾಗ ಇವರು ಈ ಕೃತ್ಯ ಎಸಗಿದ್ದಾರೆ.
ವಾಹನ ಚಲಾಯಿಸುತ್ತಿದ್ದ ಈ ನಾಲ್ವರು, ಮಸೀದಿಯ ಬಳಿ ಇದ್ದ ಕಟ್ಟಡ ಏರಿ, ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರ ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸ್ಥಳದಲ್ಲಿ ಹಿಂದೂ–ಮುಸ್ಲಿಮರ ನಡುವೆ ಕೋಮು ಉದ್ವೇಗಗೊಳಿಸುವ ವಾತಾವರಣ ಸೃಷ್ಠಿಯಾಗಿತ್ತು. ಕೂಡಲೇ ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ, ಸಂಭಾವ್ಯ ಅಪಾಯವನ್ನು ತಪ್ಪಿಸಲಾಗಿದೆ.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…
ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…