ಮಥುರಾ (ಉತ್ತರ ಪ್ರದೇಶ) : ರಾಮನವಮಿ ಶೋಭಾಯಾತ್ರೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮಾಲ್ ಮಸೀದಿಯ ಸಮೀಪ ಶಾಂತಿಭಂಗ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತರನ್ನು ಕಾವ್ಯ, ಹನಿ, ರಾಜೇಶ್ ಹಾಗೂ ದೀಪಕ್ ಎಂದು ಗುರುತಿಸಲಾಗಿದೆ.
ಗುರುವಾರ ನಡೆದ ರಾಮನವಮಿ ಮೆರವಣಿಗೆ ವೇಳೆ ಮಸೀದಿಯ ಸಮೀಪ ಇರುವ ಕಟ್ಟಡವೊಂದರಲ್ಲಿ ಕೇಸರಿ ಧ್ವಜ ಹಾರಿಸಿದ ಆರೋಪ ಇವರ ಮೇಲೆ ಇದೆ.ಘಿಯಾಮಂಡಿ ಪ್ರದೇಶದಲ್ಲಿರುವ ರಾಮ ಮಂದಿರದ ರಾಮ ಜನ್ಮ ಮಹೋತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆಯು ಚೌಕ್ ಬಜಾರ್ ಬಳಿ ತಲುಪಿದಾಗ ಇವರು ಈ ಕೃತ್ಯ ಎಸಗಿದ್ದಾರೆ.
ವಾಹನ ಚಲಾಯಿಸುತ್ತಿದ್ದ ಈ ನಾಲ್ವರು, ಮಸೀದಿಯ ಬಳಿ ಇದ್ದ ಕಟ್ಟಡ ಏರಿ, ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರ ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸ್ಥಳದಲ್ಲಿ ಹಿಂದೂ–ಮುಸ್ಲಿಮರ ನಡುವೆ ಕೋಮು ಉದ್ವೇಗಗೊಳಿಸುವ ವಾತಾವರಣ ಸೃಷ್ಠಿಯಾಗಿತ್ತು. ಕೂಡಲೇ ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ, ಸಂಭಾವ್ಯ ಅಪಾಯವನ್ನು ತಪ್ಪಿಸಲಾಗಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…