BREAKING NEWS

ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

ಮಂಗಳೂರು : ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಹಸುಗಳನ್ನು ಖರೀದಿಸಿದ್ದಾರೆ. ನಂತರ ಅವುಗಳನ್ನು ವಧೆ ಮಾಡಲು ಜಿಲ್ಲೆಯ ಉಳ್ಳಾಲ ತಾಲೂಕಿನ ಅಲೇಕಲಕ್ಕೆ ಮಿನಿ ಗೂಡ್ಸ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು.

ಸ್ಥಳವೊಂದರಲ್ಲಿ ವಾಹನವು ತಗ್ಗಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಅಲ್ಲಿಂದ ಮೇಲೆ ಚಲಿಸಲು ಸಾಧ್ಯವಾಗಿಲ್ಲ. ಆಗ ವಾಹನದಲ್ಲಿದ್ದ ಮೂವರು ಕೆಳಗಿಳಿದು ವಾಹನವನ್ನು ತಳ್ಳಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಅವರ ಸಹಾಯಕ್ಕೆ ಧಾವಿಸಿ, ವಾಹನವನ್ನು ತಳ್ಳಲು ಮುಂದಾಗಿದ್ದಾರೆ.

ಇದೇ ವೇಳೆ ವಾಹನದೊಳಗೆ ಹಸುಗಳಿಗೆ ಟಾರ್ಪಲ್ ಹೊದಿಸಿದ್ದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಅನುಮಾನಗೊಂಡು ನಾಲ್ವರನ್ನು ವಿಚಾರಿಸಿದಾಗ, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರೊಬ್ಬರ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಅಹ್ಮದ್ ಇರ್ಷಾದ್, ಖಾಲಿದ್ ಬಿಎಂ, ಜಾಫರ್ ಸಾದಿಕ್ ಮತ್ತು ಫಯಾಜ್ ಎಂದು ಗುರುತಿಸಲಾಗಿದೆ. ಖಾಲಿದ್ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಬಂಗ್ರ ಮಂಜೇಶ್ವರದವರಾಗಿದ್ದು, ಉಳಿದವರು ಉಳ್ಳಾಲದವರು.

lokesh

Recent Posts

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

20 mins ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

29 mins ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

58 mins ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

2 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

3 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

3 hours ago