BREAKING NEWS

ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

ಮಂಗಳೂರು : ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಹಸುಗಳನ್ನು ಖರೀದಿಸಿದ್ದಾರೆ. ನಂತರ ಅವುಗಳನ್ನು ವಧೆ ಮಾಡಲು ಜಿಲ್ಲೆಯ ಉಳ್ಳಾಲ ತಾಲೂಕಿನ ಅಲೇಕಲಕ್ಕೆ ಮಿನಿ ಗೂಡ್ಸ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು.

ಸ್ಥಳವೊಂದರಲ್ಲಿ ವಾಹನವು ತಗ್ಗಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಅಲ್ಲಿಂದ ಮೇಲೆ ಚಲಿಸಲು ಸಾಧ್ಯವಾಗಿಲ್ಲ. ಆಗ ವಾಹನದಲ್ಲಿದ್ದ ಮೂವರು ಕೆಳಗಿಳಿದು ವಾಹನವನ್ನು ತಳ್ಳಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಅವರ ಸಹಾಯಕ್ಕೆ ಧಾವಿಸಿ, ವಾಹನವನ್ನು ತಳ್ಳಲು ಮುಂದಾಗಿದ್ದಾರೆ.

ಇದೇ ವೇಳೆ ವಾಹನದೊಳಗೆ ಹಸುಗಳಿಗೆ ಟಾರ್ಪಲ್ ಹೊದಿಸಿದ್ದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಅನುಮಾನಗೊಂಡು ನಾಲ್ವರನ್ನು ವಿಚಾರಿಸಿದಾಗ, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರೊಬ್ಬರ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಅಹ್ಮದ್ ಇರ್ಷಾದ್, ಖಾಲಿದ್ ಬಿಎಂ, ಜಾಫರ್ ಸಾದಿಕ್ ಮತ್ತು ಫಯಾಜ್ ಎಂದು ಗುರುತಿಸಲಾಗಿದೆ. ಖಾಲಿದ್ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಬಂಗ್ರ ಮಂಜೇಶ್ವರದವರಾಗಿದ್ದು, ಉಳಿದವರು ಉಳ್ಳಾಲದವರು.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

12 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

12 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

16 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

21 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

21 hours ago