ನವದೆಹಲಿ: ಕಾನೂನು ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಯುವಕನೋರ್ವ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಘಟನೆ ನಂತರ ಹೊತ್ತಿ ಉರಿಯುತ್ತಿರುವ ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಿಕೊಡಿ ಎಂದು ಜರ್ಮನಿಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.
ಪ್ರೊ.ಎನ್ ಜಾನ್ ಕ್ಯಾಮ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂಒ, ಈ ಸಲಹೆ ಯೋಗಿ ಆದಿತ್ಯನಾಥ್ ಮಾದರಿಗೆ ಜಗತ್ತಿನಾದ್ಯಂತ ಲಭಿಸಿರುವ ಜನಪ್ರಿಯತೆ ಎಂದು ಬಣ್ಣಿಸಿದೆ.
ಜರ್ಮನಿಯ ಹೃದ್ರೋಗ ತಜ್ಞ ಎಂದು ಹೇಳಿಕೊಂಡಿರುವ ಪ್ರೊ. ಎನ್ ಜಾನ್ ಕ್ಯಾಮ್, ಫ್ರಾನ್ಸ್ ನಲ್ಲಿರುವ ಸ್ಥಿತಿಯನ್ನು ನಿಯಂತ್ರಿಸುವುದಕ್ಕಾಗಿ ಭಾರತ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಬೇಕು, ಅವರು 24 ಗಂಟೆಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತಾರೆ ಎಂದು ಯೋಗಿ ಆದಿತ್ಯನಾಥ್ ಅವರನ್ನು ಟ್ಯಾಗ್ ಮಾಡಿ ಹೇಳಿದ್ದರು.
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂಒ, ಉಗ್ರವಾದವು ಗಲಭೆಗಳಿಗೆ ಉತ್ತೇಜನ ನೀಡಿದಾಗ, ಅವ್ಯವಸ್ಥೆ ಆವರಿಸಿದಾಗ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಸಮಸ್ಯೆ ಜಗತ್ತಿನ ಯಾವುದೇ ಭಾಗದಲ್ಲಿ ಉಂಟಾದಾಗ, ಜಗತ್ತು ಸಾಂತ್ವನಕ್ಕೆ ಹಾಗೂ ಮಹಾರಾಜ್ ಜಿ (ಆದಿತ್ಯನಾಥ್) ಸ್ಥಾಪಿಸಿದ ಯೋಗಿ ಮಾದರಿಯ ಕಾನೂನು ಸುವ್ಯವಸ್ಥೆಯನ್ನು ಬಯಸುತ್ತದೆ ಎಂದು ಹೇಳಿದೆ.
ಬಿಜೆಪಿ ನಾಯಕರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಆದಿತ್ಯನಾಥ್ ಅವರು ರಾಜ್ಯದಲ್ಲಿ ಮಾಫಿಯಾ ಮತ್ತು ಕ್ರಿಮಿನಲ್ಗಳನ್ನು ಮೌನವಾಗಿಸುವುದರಲ್ಲಿ ಸಮರ್ಥರಾಗಿದ್ದಾರೆ. ”ಆದಿತ್ಯನಾಥ್ ಅವರ ವಿಶೇಷತೆಯೆಂದರೆ ಅವರು ಅಪರಾಧಿಗಳೊಂದಿಗೆ ಕಠಿಣವಾಗಿ ವ್ಯವಹರಿಸುತ್ತಾರೆ… ಅವರ ಮನೆಗಳನ್ನು ಧ್ವಂಸಗೊಳಿಸಲು ಅವರು ಬುಲ್ಡೋಜರ್ಗಳನ್ನು ಬಳಸುತ್ತಾರೆ,” ಎಂದು ಹೇಳಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…