BREAKING NEWS

ಫ್ರಾನ್ಸ್ ಗಲಭೆ ನಿಯಂತ್ರಣಕ್ಕೆ ಯೋಗಿಯನ್ನು ಕಳಿಸಿಕೊಡಿ: ಜರ್ಮನಿ ವೈದ್ಯರ ಮನವಿ

ನವದೆಹಲಿ: ಕಾನೂನು ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಯುವಕನೋರ್ವ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಘಟನೆ ನಂತರ ಹೊತ್ತಿ ಉರಿಯುತ್ತಿರುವ ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಿಕೊಡಿ ಎಂದು ಜರ್ಮನಿಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಪ್ರೊ.ಎನ್ ಜಾನ್ ಕ್ಯಾಮ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂಒ,  ಈ ಸಲಹೆ ಯೋಗಿ ಆದಿತ್ಯನಾಥ್ ಮಾದರಿಗೆ ಜಗತ್ತಿನಾದ್ಯಂತ ಲಭಿಸಿರುವ ಜನಪ್ರಿಯತೆ ಎಂದು ಬಣ್ಣಿಸಿದೆ.

ಜರ್ಮನಿಯ ಹೃದ್ರೋಗ ತಜ್ಞ ಎಂದು ಹೇಳಿಕೊಂಡಿರುವ ಪ್ರೊ. ಎನ್ ಜಾನ್ ಕ್ಯಾಮ್,  ಫ್ರಾನ್ಸ್ ನಲ್ಲಿರುವ ಸ್ಥಿತಿಯನ್ನು ನಿಯಂತ್ರಿಸುವುದಕ್ಕಾಗಿ ಭಾರತ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಬೇಕು, ಅವರು 24 ಗಂಟೆಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತಾರೆ ಎಂದು ಯೋಗಿ ಆದಿತ್ಯನಾಥ್ ಅವರನ್ನು ಟ್ಯಾಗ್ ಮಾಡಿ ಹೇಳಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಸಿಎಂಒ,  ಉಗ್ರವಾದವು ಗಲಭೆಗಳಿಗೆ ಉತ್ತೇಜನ ನೀಡಿದಾಗ, ಅವ್ಯವಸ್ಥೆ ಆವರಿಸಿದಾಗ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಸಮಸ್ಯೆ ಜಗತ್ತಿನ ಯಾವುದೇ ಭಾಗದಲ್ಲಿ ಉಂಟಾದಾಗ, ಜಗತ್ತು ಸಾಂತ್ವನಕ್ಕೆ ಹಾಗೂ ಮಹಾರಾಜ್ ಜಿ (ಆದಿತ್ಯನಾಥ್) ಸ್ಥಾಪಿಸಿದ ಯೋಗಿ ಮಾದರಿಯ ಕಾನೂನು ಸುವ್ಯವಸ್ಥೆಯನ್ನು ಬಯಸುತ್ತದೆ ಎಂದು ಹೇಳಿದೆ.

ಬಿಜೆಪಿ ನಾಯಕರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಆದಿತ್ಯನಾಥ್ ಅವರು ರಾಜ್ಯದಲ್ಲಿ ಮಾಫಿಯಾ ಮತ್ತು ಕ್ರಿಮಿನಲ್‌ಗಳನ್ನು ಮೌನವಾಗಿಸುವುದರಲ್ಲಿ ಸಮರ್ಥರಾಗಿದ್ದಾರೆ. ”ಆದಿತ್ಯನಾಥ್ ಅವರ ವಿಶೇಷತೆಯೆಂದರೆ ಅವರು ಅಪರಾಧಿಗಳೊಂದಿಗೆ ಕಠಿಣವಾಗಿ ವ್ಯವಹರಿಸುತ್ತಾರೆ… ಅವರ ಮನೆಗಳನ್ನು ಧ್ವಂಸಗೊಳಿಸಲು ಅವರು ಬುಲ್ಡೋಜರ್‌ಗಳನ್ನು ಬಳಸುತ್ತಾರೆ,” ಎಂದು ಹೇಳಿದ್ದಾರೆ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

8 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

9 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

10 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

10 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

12 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

13 hours ago