BREAKING NEWS

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಗೌರವ

ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ.

ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಮೋದಿಯವರಿಗೆ ಅಲ್ಲಿನ ನಾಯಕರು ಅಭೂತಪೂರ್ವ ಸ್ವಾಗತ ನೀಡಿದರು. ಇಂದು ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮ್ಯಾಕ್ರನ್ ಜೊತೆಗೆ ಭಾಗಿಯಾಗಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ಅರಿಂದಮ್ ಬಾಗ್ಚಿ ಅವರು ಇಲ್ಲಿನ ಎಲಿಸೀ ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ, “ಪಾಲುದಾರಿಕೆಯ ಮನೋಭಾವವನ್ನು ಸಾಕಾರಗೊಳಿಸುವ ಹೆಜ್ಜೆಯಿದು, ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ” ಎಂದು ಬರೆದುಕೊಂಡಿದ್ದಾರೆ.

“ಭಾರತದ ಜನರ ಪರವಾಗಿ ಈ ಏಕಮಾನ ಗೌರವಕ್ಕಾಗಿ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು” ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.ಇದಕ್ಕೂ ಮುನ್ನ ಫ್ರೆಂಚ್ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಅವರು ಎಲಿಸೀ ಅರಮನೆಯಲ್ಲಿ ಮೋದಿ ಅವರಿಗೆ ಖಾಸಗಿ ಔತಣಕೂಟವನ್ನು ಏರ್ಪಡಿಸಿದ್ದರು.

ಭಾರತೀಯ ವಲಸಿಗರೊಂದಿಗೆ ಪ್ರಧಾನಿ ಸಂವಾದ: ನಿನ್ನೆ ಸಂಜೆ ಪ್ಯಾರಿಸ್ ಗೆ ಬಂದಿಳಿದ ಪ್ರಧಾನಿ ಮೋದಿ ಇಲ್ಲಿನ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು.

ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಉತ್ಸಾಹಭರಿತ ಪ್ರೇಕ್ಷಕರನ್ನು ಉದ್ದೇಶಿಸಿ ಸುಮಾರು ಒಂದು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ — ಸೀನ್ ನದಿಯ ದ್ವೀಪದಲ್ಲಿ ಪ್ರದರ್ಶನ ಕಲೆಯ ಕೇಂದ್ರ – ಭಾರತದ ವೇಗದ ಬೆಳವಣಿಗೆಯನ್ನು ವಿವರಿಸಿದರು. ಜಗತ್ತು ಹೊಸದತ್ತ ಸಾಗುತ್ತಿದೆ ಎಂದು ಪ್ರತಿಪಾದಿಸಿದರು. ಸುವ್ಯವಸ್ಥೆ, ಭಾರತದ ಶಕ್ತಿ ಮತ್ತು ಪಾತ್ರವೂ ಬಹಳ ಬೇಗನೆ ಬದಲಾಗುತ್ತಿದೆ ಎಂದರು.

ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದಾಗಿ ಮೋದಿ ಘೋಷಿಸಿದರು. ಫ್ರಾನ್ಸ್ ನಲ್ಲಿ ಸ್ನಾತಕೋತ್ತರ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈಗ ಐದು ವರ್ಷಗಳ ನಂತರದ ಕೆಲಸದ ವೀಸಾಗಳನ್ನು ಪಡೆಯುತ್ತಾರೆ ಎಂದು ಭಾರತೀಯ ಸಮೂಹವನ್ನುದ್ದೇಶಿಸಿ ಪ್ರಧಾನಿ ಮೋದಿ ಘೋಷಣೆ ಮಾಡಿದರು.

andolanait

Recent Posts

ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ: ಪ್ರೊ. ಎಸ್.ಆರ್.ನಿರಂಜನ

ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ…

17 mins ago

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ :‌ ದರ ಏರಿಕೆ ಸ್ಥಗಿತ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…

40 mins ago

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…

2 hours ago

ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…

2 hours ago

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

3 hours ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

3 hours ago