BREAKING NEWS

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಗೌರವ

ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ.

ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಮೋದಿಯವರಿಗೆ ಅಲ್ಲಿನ ನಾಯಕರು ಅಭೂತಪೂರ್ವ ಸ್ವಾಗತ ನೀಡಿದರು. ಇಂದು ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮ್ಯಾಕ್ರನ್ ಜೊತೆಗೆ ಭಾಗಿಯಾಗಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ಅರಿಂದಮ್ ಬಾಗ್ಚಿ ಅವರು ಇಲ್ಲಿನ ಎಲಿಸೀ ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ, “ಪಾಲುದಾರಿಕೆಯ ಮನೋಭಾವವನ್ನು ಸಾಕಾರಗೊಳಿಸುವ ಹೆಜ್ಜೆಯಿದು, ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ” ಎಂದು ಬರೆದುಕೊಂಡಿದ್ದಾರೆ.

“ಭಾರತದ ಜನರ ಪರವಾಗಿ ಈ ಏಕಮಾನ ಗೌರವಕ್ಕಾಗಿ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು” ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.ಇದಕ್ಕೂ ಮುನ್ನ ಫ್ರೆಂಚ್ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಅವರು ಎಲಿಸೀ ಅರಮನೆಯಲ್ಲಿ ಮೋದಿ ಅವರಿಗೆ ಖಾಸಗಿ ಔತಣಕೂಟವನ್ನು ಏರ್ಪಡಿಸಿದ್ದರು.

ಭಾರತೀಯ ವಲಸಿಗರೊಂದಿಗೆ ಪ್ರಧಾನಿ ಸಂವಾದ: ನಿನ್ನೆ ಸಂಜೆ ಪ್ಯಾರಿಸ್ ಗೆ ಬಂದಿಳಿದ ಪ್ರಧಾನಿ ಮೋದಿ ಇಲ್ಲಿನ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು.

ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಉತ್ಸಾಹಭರಿತ ಪ್ರೇಕ್ಷಕರನ್ನು ಉದ್ದೇಶಿಸಿ ಸುಮಾರು ಒಂದು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ — ಸೀನ್ ನದಿಯ ದ್ವೀಪದಲ್ಲಿ ಪ್ರದರ್ಶನ ಕಲೆಯ ಕೇಂದ್ರ – ಭಾರತದ ವೇಗದ ಬೆಳವಣಿಗೆಯನ್ನು ವಿವರಿಸಿದರು. ಜಗತ್ತು ಹೊಸದತ್ತ ಸಾಗುತ್ತಿದೆ ಎಂದು ಪ್ರತಿಪಾದಿಸಿದರು. ಸುವ್ಯವಸ್ಥೆ, ಭಾರತದ ಶಕ್ತಿ ಮತ್ತು ಪಾತ್ರವೂ ಬಹಳ ಬೇಗನೆ ಬದಲಾಗುತ್ತಿದೆ ಎಂದರು.

ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದಾಗಿ ಮೋದಿ ಘೋಷಿಸಿದರು. ಫ್ರಾನ್ಸ್ ನಲ್ಲಿ ಸ್ನಾತಕೋತ್ತರ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈಗ ಐದು ವರ್ಷಗಳ ನಂತರದ ಕೆಲಸದ ವೀಸಾಗಳನ್ನು ಪಡೆಯುತ್ತಾರೆ ಎಂದು ಭಾರತೀಯ ಸಮೂಹವನ್ನುದ್ದೇಶಿಸಿ ಪ್ರಧಾನಿ ಮೋದಿ ಘೋಷಣೆ ಮಾಡಿದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago