BREAKING NEWS

‌ವಂಚನೆ ಆರೋಪ : ಸಿಸಿಬಿ ಪೊಲೀಸರ ಅತಿಥಿಯಾದ ಚೈತ್ರಾ ಕುಂದಾಪುರ

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಸುಮಾರು 7 ಕೋಟಿ ರೂ. ವಂಚಿಸಿರುವ ಆರೋಪದಲ್ಲಿ ಈಗ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿರುವ ಕಥೆ ಸಿನಿಮಾಗಿಂತಲೂ ರೋಚಕವಾಗಿದ್ದು, ಚೈತ್ರಾ ಕುಂದಾಪುರ ಸ್ವತಃ ತಾವೇ ಮೂವರು ಕೇಂದ್ರ ಬಿಜೆಪಿ ನಾಯಕರನ್ನು ಸೃಷ್ಟಿಸಿ ಉದ್ಯಮಿಯನ್ನು ನಂಬಿಸಿರುವುದು ಬಯಲಾಗಿದೆ.

ತನಗೆ ಬಿಜೆಪಿಯ ಕೇಂದ್ರ ನಾಯಕರು ಹಾಗೂ ಆರ್ ಎಸ್ ಎಸ್ ವರಿಷ್ಠರು ಪರಿಚಯ ಎಂದು ಹಂತ ಹಂತವಾಗಿ ಏಳು ಕೋಟಿ ರೂಪಾಯಿಯನ್ನು ಉದ್ಯಮಿಯಿಂದ ಪಡೆದಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ವ್ಯವಸ್ಥಿತ ಪ್ಲಾನ್‌ ಮಾಡಿದ್ದ ಚೈತ್ರಾ ನಕಲಿ ಕೇಂದ್ರದ ನಾಯಕರನ್ನೇ ಸೃಷ್ಟಿಸಿದ್ದರು ಎಂದು ತಿಳಿದುಬಂದಿದೆ. ಸಲೂನ್ ಕೆಲಸಗಾರರು, ಕಬಾಬ್ ಮಾರುವವರನ್ನೇ ಬಿಜೆಪಿಯ ಕೇಂದ್ರದ ನಾಯಕರು ಎಂದು ಉದ್ಯಮಿಗೆ ನಂಬಿಸಿದ್ದರು ಎಂದು ಹೇಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸಲೂನ್ ಶಾಪ್‌ ಒಂದರಲ್ಲಿ ಮೇಕಪ್‌ ಮಾಡುವ ರಮೇಶ್‌ ಹಾಗೂ ಧನರಾಜ್ ಎಂಬವರನ್ನು ಆರ್‌ಎಸ್‌ಎಸ್‌ ಪ್ರಚಾರಕರು ಎಂದು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಪರಿಚಯ ಮಾಡಿಸಲಾಗಿತ್ತು. ಅದಲ್ಲದೇ ಬೆಂಗಳೂರಿನ ಕೆಆರ್ ಪುರಂ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ನಾಯಕ್ ಎಂಬಾತನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ಪರಿಚಯ ಮಾಡಿ ಉದ್ಯಮಿಯನ್ನು ಮೋಸದ ಬಲೆಗೆ ಚೈತ್ರಾ ಕುಂದಾಪುರ ಸಿಲುಕಿಸಿದ್ದರು ಎಂದು ತಿಳಿದುಬಂದಿದೆ.

ನಕಲಿ ಪಾತ್ರದಾರಿಗಳಿಗೆ ಕಡೂರಿನ ಮನೆಯೊಂದರಲ್ಲಿ ಚೈತ್ರಾ ಕುಂದಾಪುರ ತರಬೇತಿ ನೀಡಿದ್ದರು ಎನ್ನಲಾಗಿದೆ. ಕಬಾಬ್ ಮಾರುತ್ತಿದ್ದ ವ್ಯಕ್ತಿಗೆ ಚೈತ್ರಾ ಕುಂದಾಪುರ ಮತ್ತು ಗಗನ್ 93 ಸಾವಿರ ರೂಪಾಯಿಯನ್ನು ನೀಡಿದ್ದರು. ಇನ್ನು, ಈ ನಾಟಕ ಮಾಡಲು ಗಗನ್ ಮತ್ತು ಧನರಾಜ್ ತಲಾ 1.20 ಲಕ್ಷ ರೂಪಾಯಿಯನ್ನು ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ. ಜೊತೆಗೆ ಆರ್‌ ಎಸ್ಎಸ್ ಸಂಘಟನೆ ಹೆಸರಿನ ಕಾರ್‌ ಬಳಸಲು 2 ಲಕ್ಷ ರೂ. ಅನ್ನು ಸಹ ನೀಡಲಾಗಿತ್ತು ಎಂದು ತಿಳಿದುಬಂದಿದೆ.

lokesh

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago