BREAKING NEWS

‌ವಂಚನೆ ಆರೋಪ : ಸಿಸಿಬಿ ಪೊಲೀಸರ ಅತಿಥಿಯಾದ ಚೈತ್ರಾ ಕುಂದಾಪುರ

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಸುಮಾರು 7 ಕೋಟಿ ರೂ. ವಂಚಿಸಿರುವ ಆರೋಪದಲ್ಲಿ ಈಗ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿರುವ ಕಥೆ ಸಿನಿಮಾಗಿಂತಲೂ ರೋಚಕವಾಗಿದ್ದು, ಚೈತ್ರಾ ಕುಂದಾಪುರ ಸ್ವತಃ ತಾವೇ ಮೂವರು ಕೇಂದ್ರ ಬಿಜೆಪಿ ನಾಯಕರನ್ನು ಸೃಷ್ಟಿಸಿ ಉದ್ಯಮಿಯನ್ನು ನಂಬಿಸಿರುವುದು ಬಯಲಾಗಿದೆ.

ತನಗೆ ಬಿಜೆಪಿಯ ಕೇಂದ್ರ ನಾಯಕರು ಹಾಗೂ ಆರ್ ಎಸ್ ಎಸ್ ವರಿಷ್ಠರು ಪರಿಚಯ ಎಂದು ಹಂತ ಹಂತವಾಗಿ ಏಳು ಕೋಟಿ ರೂಪಾಯಿಯನ್ನು ಉದ್ಯಮಿಯಿಂದ ಪಡೆದಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ವ್ಯವಸ್ಥಿತ ಪ್ಲಾನ್‌ ಮಾಡಿದ್ದ ಚೈತ್ರಾ ನಕಲಿ ಕೇಂದ್ರದ ನಾಯಕರನ್ನೇ ಸೃಷ್ಟಿಸಿದ್ದರು ಎಂದು ತಿಳಿದುಬಂದಿದೆ. ಸಲೂನ್ ಕೆಲಸಗಾರರು, ಕಬಾಬ್ ಮಾರುವವರನ್ನೇ ಬಿಜೆಪಿಯ ಕೇಂದ್ರದ ನಾಯಕರು ಎಂದು ಉದ್ಯಮಿಗೆ ನಂಬಿಸಿದ್ದರು ಎಂದು ಹೇಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸಲೂನ್ ಶಾಪ್‌ ಒಂದರಲ್ಲಿ ಮೇಕಪ್‌ ಮಾಡುವ ರಮೇಶ್‌ ಹಾಗೂ ಧನರಾಜ್ ಎಂಬವರನ್ನು ಆರ್‌ಎಸ್‌ಎಸ್‌ ಪ್ರಚಾರಕರು ಎಂದು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಪರಿಚಯ ಮಾಡಿಸಲಾಗಿತ್ತು. ಅದಲ್ಲದೇ ಬೆಂಗಳೂರಿನ ಕೆಆರ್ ಪುರಂ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ನಾಯಕ್ ಎಂಬಾತನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ಪರಿಚಯ ಮಾಡಿ ಉದ್ಯಮಿಯನ್ನು ಮೋಸದ ಬಲೆಗೆ ಚೈತ್ರಾ ಕುಂದಾಪುರ ಸಿಲುಕಿಸಿದ್ದರು ಎಂದು ತಿಳಿದುಬಂದಿದೆ.

ನಕಲಿ ಪಾತ್ರದಾರಿಗಳಿಗೆ ಕಡೂರಿನ ಮನೆಯೊಂದರಲ್ಲಿ ಚೈತ್ರಾ ಕುಂದಾಪುರ ತರಬೇತಿ ನೀಡಿದ್ದರು ಎನ್ನಲಾಗಿದೆ. ಕಬಾಬ್ ಮಾರುತ್ತಿದ್ದ ವ್ಯಕ್ತಿಗೆ ಚೈತ್ರಾ ಕುಂದಾಪುರ ಮತ್ತು ಗಗನ್ 93 ಸಾವಿರ ರೂಪಾಯಿಯನ್ನು ನೀಡಿದ್ದರು. ಇನ್ನು, ಈ ನಾಟಕ ಮಾಡಲು ಗಗನ್ ಮತ್ತು ಧನರಾಜ್ ತಲಾ 1.20 ಲಕ್ಷ ರೂಪಾಯಿಯನ್ನು ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ. ಜೊತೆಗೆ ಆರ್‌ ಎಸ್ಎಸ್ ಸಂಘಟನೆ ಹೆಸರಿನ ಕಾರ್‌ ಬಳಸಲು 2 ಲಕ್ಷ ರೂ. ಅನ್ನು ಸಹ ನೀಡಲಾಗಿತ್ತು ಎಂದು ತಿಳಿದುಬಂದಿದೆ.

lokesh

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

34 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

1 hour ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

2 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

4 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago